ಬ್ರೇಕಿಂಗ್ ನ್ಯೂಸ್
26-08-20 10:42 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಹಣಕಾಸಿನ ತೊಂದರೆಗೆ ಸಿಲುಕಿ ವೃದ್ಧೆಯ ಹತ್ಯೆಗೈದು 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ರಾಯಚೂರು ಜಿಲ್ಲೆಯ ವೀರೇಶ್, ಆತನ ಪತ್ನಿ ಚೈತ್ರಾ ಮತ್ತು ಪ್ರಶಾಂತ್ ಎಂದು ಗುರುತಿಸಲಾಗಿದೆ. ಇದೇ ತಿಂಗಳ ಆ.12ರ ಬೆಳಗ್ಗೆ 10.30ರ ವೇಳೆ ಕಾಡುಗೋಡಿಯ ಚನ್ನಸಂದ್ರದಲ್ಲಿ ಜಯಮ್ಮ(65) ಅವರ ಕೊಲೆ ನಡೆದಿತ್ತು. ಈ ಕೊಲೆಯಿಂದ ಬಡಾವಣೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದರು.
ಆರೋಪಿಗಳು ಕೊಲೆಗೈದು 45 ಲಕ್ಷ ರೂ.ಹಣ, 88 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಾಡುಗೋಡಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆ ಮಾಡಿರುವ ಆರೋಪಿ ವೀರೇಶ್ ಮತ್ತು ಚೈತ್ರಾ ದಂಪತಿ ಕಳೆದ ಎರಡು ವರ್ಷಗಳಿಂದ ಅಪ್ಪಯ್ಯಣ್ಣ, ಜಯಮ್ಮ ಅವರ ಮನೆಯಲ್ಲಿ ಬಾಡಿಗೆಗಿದ್ದರು. ವೀರೇಶ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರೆ ಚೈತ್ರಾ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಬಾಡಿಗೆ ಕಟ್ಟಲಾಗದೇ ಆರ್ಥಿಕ ಸಂಕಷ್ಟದಲ್ಲಿ ಮುಳುಗಿದ್ದು, ದಂಪತಿ ಕಳ್ಳತನ ಮಾಡಲು ನಿರ್ಧರಿಸಿದ್ದರು.
ಅದರಂತೆ ತಮ್ಮದೇ ಗ್ರಾಮದಿಂದ ಪ್ರಶಾಂತ್ ಎಂಬ ಮತ್ತೊಬ್ಬ ಆರೋಪಿಯನ್ನು ಕರೆಸಿಕೊಂಡು ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಹೋರಹೋಗಿದ್ದಾಗ ಜಯಮ್ಮ ಒಬ್ಬಂಟಿಯಾಗಿದ್ದನ್ನು ಗಮನಿಸಿ ಮೂವರು ಮನೆಗೆ ನುಗ್ಗಿ, ಕತ್ತು ಸೀಳಿ ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದರು. ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm