ಬ್ರೇಕಿಂಗ್ ನ್ಯೂಸ್
06-05-21 04:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 06: ಖಾಸಗಿ ಆಸ್ಪತ್ರೆಗೆ ಹೋದವರು ಬದುಕಿ ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಗೆ ಹೋದವರು ಶವವಾಗಿ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಶ್ರಮದ ಬಗ್ಗೆ ಅನುಮಾನವಿಲ್ಲ ಆದರೆ ಕೊರೊನಾ ಸೋಂಕು ತಡೆಯಲು ಆಗುತ್ತಿಲ್ಲವಲ್ಲ ಎಂದು ಪ್ರಶ್ನಿಸಿದರು

ನಿಮಗೆ ಕೈ ಮುಗಿದು ಕೇಳುತ್ತೇನೆ, ಬಡವರ ಜೀವ ಉಳಿಸಿಕೊಡಿ, ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದೆ, ರಾಜ್ಯದಲ್ಲಿ 56 ಮೆಡಿಕಲ್ ಕಾಲೇಜುಗಳಿವೆ, ಕಾಲೇಜು ವೈದ್ಯರನ್ನು ಕರೆದು ಮಾತನಾಡಿ, ಒಬ್ಬೊಬ್ಬರ ಬಳಿ 700 ಬೆಡ್ಗಳಿವೆ ಎಂದರು.

ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಸೇರಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು, ಅಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ ಆದರೆ 17 ಮಂದಿ ಹೆಸರನ್ನು ಮಾತ್ರ ಹೇಳಿದ್ದಾರೆ. ಕೇವಲ ಮುಸ್ಲಿಮರ ಹೆಸರನ್ನು ಮಾತ್ರ ಹೇಳುತ್ತಾರೆ, ಮುಸ್ಲಿಮರು ನಾವು ಸಹೋದರರು, ಒಟ್ಟಿಗೆ ಜೀವಿಸುತ್ತೇವೆ, ಒಟ್ಟಿಗೆ ಸಾಯುತ್ತೇವೆ, ಅವರು ಮಾಂಸ ಕಡಿಯುವುದಿಲ್ಲ ಎಂದರೆ ನಾವು ಮಾಂಸ ತಿನ್ನುವುದಿಲ್ಲ, ಅವರು ಪಂಕ್ಚರ್ ಹಾಕಲ್ಲ ಎಂದರೆ ನಮ್ಮ ಗಾಡಿ ಮುಂದೆಯೇ ಹೋಗಲ್ಲ ಎಂದರು.

ಮೊದಲು ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು, ಕೋಮು ದ್ವೇಷ ಭಾವನೆಯನ್ನು ಜನರಲ್ಲಿ ಹುಟ್ಟಿಸುತ್ತಿದ್ದಾರೆ. ಚಾಮರಾಜನಗರ ಘಟನೆಯನ್ನು ಬೇರೆಡೆಗೆ ಸೆಳೆಯಲು ಈ ಬೆಡ್ ಬ್ಲಾಕಿಂಗ್ ವಿಚಾರ ಮುಂದಕ್ಕೆ ತಂದಿದ್ದಾರೆ. ಅದನ್ನೇ ಕುಮಾರಸ್ವಾಮಿಯವರೂ ಕೂಡ ಹೇಳಿದ್ದಾರೆ ಎಂದರು
People who go to govt hospitals will come back dead slammed D K Shivakumar in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm