ಬ್ರೇಕಿಂಗ್ ನ್ಯೂಸ್
07-05-21 08:02 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 7: ರಾಜ್ಯದಲ್ಲಿ ಲಾಕ್ಡೌನ್ ಆದೇಶವನ್ನು ಮತ್ತೆ 14 ದಿನಗಳಿಗೆ ವಿಸ್ತರಣೆ ಮಾಡಲಾಗಿದ್ದು, ಮೇ 10ರಿಂದ 24ರ ವರೆಗೆ ಕಠಿಣ ನಿಯಮಗಳನ್ನು ಹೇರುವ ಮೂಲಕ ಹೊಸ ಮಾರ್ಗಸೂಚಿ ಆದೇಶ ಮಾಡಲಾಗಿದೆ.
ಈ ಬಗ್ಗೆ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ್ದಾರೆ. ಕೊರೊನಾ ಎರಡನೇ ಅಲೆ ಹರಡುವುದನ್ನು ತಪ್ಪಿಸಲು ಮತ್ತೆ ಲಾಕ್ಡೌನ್ ಹೇರುವುದು ಅನಿವಾರ್ಯ. ಹೊಟೇಲ್, ಪಬ್, ಬಾರ್, ಕೈಗಾರಿಕಾ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ದಿನಸಿ, ತರಕಾರಿ, ಹಾಲು ಖರೀದಿಗೆ ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅವಕಾಶ ನೀಡಲಾಗುವುದು. ಆದರೆ, ವಾಹನ ಬಳಕೆಗೆ ಅವಕಾಶ ಇಲ್ಲ. ನಡೆದುಕೊಂಡೇ ಬಂದು ದಿನಸಿ ಸಾಮಗ್ರಿ ಪಡೆಯಬಹುದು.
ಬೆಳಗ್ಗೆ ಹತ್ತರಿಂದ ಯಾರು ಕೂಡ ಓಡಾಡುವಂತಿಲ್ಲ. ಪೊಲೀಸರು ಕಟ್ಟುನಿಟ್ಟಾಗಿ ಈ ಕಾನೂನನ್ನು ಪಾಲನೆ ಮಾಡಲಿದ್ದಾರೆ. ಇದರ ಜೊತೆಗೆ ಅಂತರ್ ಜಿಲ್ಲಾ ವಾಹನ ಸಂಚಾರವನ್ನು ನಿಷೇಧ ಮಾಡಲಾಗಿದೆ. ಸರಕು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಮೊದಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳಿಗೆ 50 ಜನರಿಗೆ ಮೀರದಂತೆ ನಡೆಸಲು ಅನುಮತಿ ನೀಡಲಾಗಿದೆ. ಇದೇ ವೇಳೆ, ರೈಲು ಮತ್ತು ವಿಮಾನ ಯಾನ ಎಂದಿನಂತೆ ಇರಲಿದೆ, ಅದನ್ನು ನಿರ್ಬಂಧಿಸುವ ಅಧಿಕಾರ ನಮ್ಮ ಕೈಲಿಲ್ಲ. ಬೆಂಗಳೂರಿನಲ್ಲಿ ಸಂಚರಿಸುವ ಮೆಟ್ರೋ ರೈಲನ್ನು ನಿಷೇಧಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ರೈಲು, ವಿಮಾನ ಸಂಚಾರ ಮಾಡುವವರು ಟಿಕೆಟ್ ಪಡೆದು ಸಂಚರಿಸಬೇಕು. ಟ್ಯಾಕ್ಸಿ ವಾಹನಗಳಿಗೆ ಅವಕಾಶ ಇರುವುದಿಲ್ಲ. ಆದರೆ, ಎಮರ್ಜೆನ್ಸಿ ಅಗತ್ಯಗಳಿಗೆ ಮಾತ್ರ ಟ್ಯಾಕ್ಸಿ ಬಳಸಲು ಅವಕಾಶ ನೀಡಲಾಗಿದೆ. ಫುಡ್ ಡೆಲಿವರಿ ಮಾಡುವ ಏಜನ್ಸಿಗಳಿಗೆ ಅವಕಾಶ ನೀಡಲಾಗಿದೆ. ಇನ್ನು ಎಲ್ಲ ರೀತಿಯ ಧಾರ್ಮಿಕ, ರಾಜಕೀಯ ಸಭೆ, ಆಚರಣೆಗಳಿಗೆ ಅವಕಾಶ ಇರಲ್ಲ. ಸಾರಿಗೆ ಸಂಚಾರಕ್ಕೆ ಸಂಪೂರ್ಣ ನಿಷೇಧಿಸಲಾಗಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿ ಎಲ್ಲ ರೀತಿ ಸಾರಿಗೆ ಸಂಚಾರಕ್ಕೆ ನಿಯಂತ್ರಣ ಹೇರಲಾಗಿದೆ. ತಳ್ಳುಗಾಡಿಗಳಿಗೆ ಅವಕಾಶ ನೀಡಲಾಗಿದೆ. ಮದ್ಯ ಪಾರ್ಸೆಲ್ ಪಡೆಯುವುದಕ್ಕೂ ಬೆಳಗ್ಗಿನ ಹೊತ್ತಲ್ಲಿ ಅವಕಾಶ ನೀಡಿದೆ.
ಈ ಹಿಂದೆ ಮೇ 12ರ ವರೆಗೆ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಅದರಲ್ಲಿ ಕೈಗಾರಿಕೆ ಮತ್ತು ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗಿತ್ತು. ಬಾರ್, ಹೊಟೇಲ್ ಗಳಲ್ಲಿ ಪಾರ್ಸೆಲ್ ಗಳಿಗೆ ಅವಕಾಶ ನೀಡಲಾಗಿತ್ತು. ಈಗಿನ ಹೊಸ ಆದೇಶದಲ್ಲಿಯೂ ಬಹುತೇಕ ಅದೇ ನೀತಿ ಇರುವಂತಿದೆ. ಹೊಸ ಮಾರ್ಗಸೂಚಿ ಎಂದು ಹೇಳಿಕೊಂಡರೂ, ಹೊಸತನ್ನು ಕೊಟ್ಟಿಲ್ಲ. ಅಂತರ್ ಜಿಲ್ಲಾ ಓಡಾಟ ಮತ್ತು ಕೈಗಾರಿಕೆಗೆ ಹೆಚ್ಚುವರಿಯಾಗಿ ನಿಯಂತ್ರಣ ಹೇರಲಾಗಿದೆ.
Karnataka Covid lockdown news live: State to go under complete lockdown from May 10 to May 24, says CM. Karnataka has decided to impose a complete lockdown. Essential services will be allowed to remain functional from 6 am to 10 am every day. All commercial activities are prohibited.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm