ಬ್ರೇಕಿಂಗ್ ನ್ಯೂಸ್
08-05-21 10:11 pm Satish, Correspondent ಕರ್ನಾಟಕ
ನವದೆಹಲಿ, ಮೇ 8: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಕೋವಿಡ್ ಪಾಸಿಟಿವ್ ರಿಪೋರ್ಟ್ ತೋರಿಸಬೇಕೆಂದು ಕಡ್ಡಾಯ ಪಡಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕಿನ ಲಕ್ಷಣಗಳಿಂದ ಬಳಲುತ್ತಿರುವ ಯಾವುದೇ ವ್ಯಕ್ತಿಯನ್ನು ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ ಎಂದು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆಯನ್ನು ನೀಡಿದೆ.
ಕೊರೊನಾ ಎರಡನೇ ಅಲೆ ಮಾರಣಾಂತಿಕ ಆಗುತ್ತಿರುವ ಸಂದರ್ಭದಲ್ಲಿ ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಕುರಿತ ನೀತಿಯನ್ನು ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು ಯಾವುದೇ ವ್ಯಕ್ತಿ ಸೋಂಕಿನ ಲಕ್ಷಣಗಳಿಂದ ಬಳಲುತ್ತಿದ್ದರೆ, ಆತನಿಗೆ ಪಾಸಿಟಿವ್ ರಿಪೋರ್ಟ್ ಬೇಕೆಂದು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ. ಶಂಕಿತ ಲಕ್ಷಣಗಳಿದ್ದರೆ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಹೊಸ ಆದೇಶದಲ್ಲಿ ತಿಳಿಸಲಾಗಿದೆ.

ಈ ಹೊಸ ಮಾರ್ಗಸೂಚಿ ಎಲ್ಲ ರಾಜ್ಯಗಳ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುತ್ತದೆ. ಈ ಬಗ್ಗೆ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಪ್ರಾದೇಶಿಕ ಮಟ್ಟದ ಆಸ್ಪತ್ರೆಗಳಿಗೆ ನಿರ್ದೇಶನಗಳನ್ನು ನೀಡುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.
ಯಾವುದೇ ವ್ಯಕ್ತಿಯನ್ನು ಕೋವಿಡ್ ವಾರ್ಡಿಗೆ ದಾಖಲಿಸಿಕೊಳ್ಳಲು ಪಾಸಿಟಿವ್ ಸರ್ಟಿಫಿಕೇಟ್ ಹೊಂದಿರಬೇಕೆಂದು ಕಡ್ಡಾಯ ಮಾಡುವಂತಿಲ್ಲ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ, ಕೋವಿಡ್ ಕೇರ್ ಸೆಂಟರಿಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ಯಾವುದೇ ವ್ಯಕ್ತಿ ದೇಶದ ಯಾವುದೇ ನಗರ ಅಥವಾ ಇನ್ನಾವುದೇ ಭಾಗದಲ್ಲಿ ಆಸ್ಪತ್ರೆಗೆ ದಾಖಲಾದರೂ, ಆತನಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಆತನಿಗೆ ಬೇಕಾದ ಆಕ್ಸಿಜನ್ ಇನ್ನಿತರ ಸೌಲಭ್ಯಗಳನ್ನೂ ಒದಗಿಸಬೇಕು.
ಯಾವುದೇ ನಗರಗಳಲ್ಲಿ ಆಯಾ ಭಾಗದ ಆಸ್ಪತ್ರೆಗಳು ದಾಖಲಾದ ವ್ಯಕ್ತಿಯನ್ನು ಇದೇ ಪರಿಸರದ ನಿವಾಸಿಯೆಂದು ಐಡಿ ಕಾರ್ಡ್ ತೋರಿಸುವಂತೆ ಕಡ್ಡಾಯ ಪಡಿಸುವಂತಿಲ್ಲ. ಆತ ದೇಶದ ಯಾವುದೇ ಮೂಲೆಯ ನಿವಾಸಿಯೇ ಆಗಿದ್ದರೂ, ಆತನಿಗೆ ಅಗತ್ಯವುಳ್ಳ ಚಿಕಿತ್ಸೆಯನ್ನು ಆಸ್ಪತ್ರೆಗಳು ನೀಡಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ಕೇಂದ್ರ ಸರಕಾರ ಹೇಳಿದೆ.
The Centre on May 8 revised the national policy for admission of COVID-19 patients to the hospitals. A test report confirming the coronavirus infection is no longer mandatory for admission of patients to the COVID-dedicated medical facilities, the Union Health Ministry said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm