ಬ್ರೇಕಿಂಗ್ ನ್ಯೂಸ್
08-05-21 10:11 pm Satish, Correspondent ಕರ್ನಾಟಕ
ನವದೆಹಲಿ, ಮೇ 8: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಕೋವಿಡ್ ಪಾಸಿಟಿವ್ ರಿಪೋರ್ಟ್ ತೋರಿಸಬೇಕೆಂದು ಕಡ್ಡಾಯ ಪಡಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕಿನ ಲಕ್ಷಣಗಳಿಂದ ಬಳಲುತ್ತಿರುವ ಯಾವುದೇ ವ್ಯಕ್ತಿಯನ್ನು ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ ಎಂದು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆಯನ್ನು ನೀಡಿದೆ.
ಕೊರೊನಾ ಎರಡನೇ ಅಲೆ ಮಾರಣಾಂತಿಕ ಆಗುತ್ತಿರುವ ಸಂದರ್ಭದಲ್ಲಿ ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಕುರಿತ ನೀತಿಯನ್ನು ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು ಯಾವುದೇ ವ್ಯಕ್ತಿ ಸೋಂಕಿನ ಲಕ್ಷಣಗಳಿಂದ ಬಳಲುತ್ತಿದ್ದರೆ, ಆತನಿಗೆ ಪಾಸಿಟಿವ್ ರಿಪೋರ್ಟ್ ಬೇಕೆಂದು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ. ಶಂಕಿತ ಲಕ್ಷಣಗಳಿದ್ದರೆ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಹೊಸ ಆದೇಶದಲ್ಲಿ ತಿಳಿಸಲಾಗಿದೆ.
ಈ ಹೊಸ ಮಾರ್ಗಸೂಚಿ ಎಲ್ಲ ರಾಜ್ಯಗಳ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುತ್ತದೆ. ಈ ಬಗ್ಗೆ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಪ್ರಾದೇಶಿಕ ಮಟ್ಟದ ಆಸ್ಪತ್ರೆಗಳಿಗೆ ನಿರ್ದೇಶನಗಳನ್ನು ನೀಡುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.
ಯಾವುದೇ ವ್ಯಕ್ತಿಯನ್ನು ಕೋವಿಡ್ ವಾರ್ಡಿಗೆ ದಾಖಲಿಸಿಕೊಳ್ಳಲು ಪಾಸಿಟಿವ್ ಸರ್ಟಿಫಿಕೇಟ್ ಹೊಂದಿರಬೇಕೆಂದು ಕಡ್ಡಾಯ ಮಾಡುವಂತಿಲ್ಲ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ, ಕೋವಿಡ್ ಕೇರ್ ಸೆಂಟರಿಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ಯಾವುದೇ ವ್ಯಕ್ತಿ ದೇಶದ ಯಾವುದೇ ನಗರ ಅಥವಾ ಇನ್ನಾವುದೇ ಭಾಗದಲ್ಲಿ ಆಸ್ಪತ್ರೆಗೆ ದಾಖಲಾದರೂ, ಆತನಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಆತನಿಗೆ ಬೇಕಾದ ಆಕ್ಸಿಜನ್ ಇನ್ನಿತರ ಸೌಲಭ್ಯಗಳನ್ನೂ ಒದಗಿಸಬೇಕು.
ಯಾವುದೇ ನಗರಗಳಲ್ಲಿ ಆಯಾ ಭಾಗದ ಆಸ್ಪತ್ರೆಗಳು ದಾಖಲಾದ ವ್ಯಕ್ತಿಯನ್ನು ಇದೇ ಪರಿಸರದ ನಿವಾಸಿಯೆಂದು ಐಡಿ ಕಾರ್ಡ್ ತೋರಿಸುವಂತೆ ಕಡ್ಡಾಯ ಪಡಿಸುವಂತಿಲ್ಲ. ಆತ ದೇಶದ ಯಾವುದೇ ಮೂಲೆಯ ನಿವಾಸಿಯೇ ಆಗಿದ್ದರೂ, ಆತನಿಗೆ ಅಗತ್ಯವುಳ್ಳ ಚಿಕಿತ್ಸೆಯನ್ನು ಆಸ್ಪತ್ರೆಗಳು ನೀಡಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ಕೇಂದ್ರ ಸರಕಾರ ಹೇಳಿದೆ.
The Centre on May 8 revised the national policy for admission of COVID-19 patients to the hospitals. A test report confirming the coronavirus infection is no longer mandatory for admission of patients to the COVID-dedicated medical facilities, the Union Health Ministry said.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm