ಬ್ರೇಕಿಂಗ್ ನ್ಯೂಸ್
30-07-20 10:32 am News Correspondant ಕರ್ನಾಟಕ
ಬೆಂಗಳೂರು(ಜು.30): ನೂತನ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಮಾಡಿದರು. ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಎಂಎಲ್ಸಿ ಆಗಿ ಪ್ರಮಾನವಚನ ತೆಗೆದುಕೊಂಡ ಬಳಿಕ ಮಾತಾಡಿದ ಎಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಬೆಂಬಲಕ್ಕೆ ನಾವಿದ್ದೇವೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು ಎಚ್. ವಿಶ್ವನಾಥ್.
ಇನ್ನು, ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು.
ಹೀಗೆ ಮುಂದುವರಿದ ಅವರು, ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಧಾನಪರಿಷತ್ಗೆ ರಾಜ್ಯಪಾಲರಿಂದ ನೇರವಾಗಿ ನಾಮನಿರ್ದೇಶನಗೊಂಡಿದ್ದ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಂ ಸಿದ್ದಿ ಮತ್ತು ಸಾಬಣ್ಣ ತಲವಾರ್ ಅವರು ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm