ಬ್ರೇಕಿಂಗ್ ನ್ಯೂಸ್
30-07-20 10:32 am News Correspondant ಕರ್ನಾಟಕ
ಬೆಂಗಳೂರು(ಜು.30): ನೂತನ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಮಾಡಿದರು. ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಎಂಎಲ್ಸಿ ಆಗಿ ಪ್ರಮಾನವಚನ ತೆಗೆದುಕೊಂಡ ಬಳಿಕ ಮಾತಾಡಿದ ಎಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಬೆಂಬಲಕ್ಕೆ ನಾವಿದ್ದೇವೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು ಎಚ್. ವಿಶ್ವನಾಥ್.
ಇನ್ನು, ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು.
ಹೀಗೆ ಮುಂದುವರಿದ ಅವರು, ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಧಾನಪರಿಷತ್ಗೆ ರಾಜ್ಯಪಾಲರಿಂದ ನೇರವಾಗಿ ನಾಮನಿರ್ದೇಶನಗೊಂಡಿದ್ದ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಂ ಸಿದ್ದಿ ಮತ್ತು ಸಾಬಣ್ಣ ತಲವಾರ್ ಅವರು ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm