ಬ್ರೇಕಿಂಗ್ ನ್ಯೂಸ್
30-07-20 10:32 am News Correspondant ಕರ್ನಾಟಕ
ಬೆಂಗಳೂರು(ಜು.30): ನೂತನ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಮಾಡಿದರು. ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಎಂಎಲ್ಸಿ ಆಗಿ ಪ್ರಮಾನವಚನ ತೆಗೆದುಕೊಂಡ ಬಳಿಕ ಮಾತಾಡಿದ ಎಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಬೆಂಬಲಕ್ಕೆ ನಾವಿದ್ದೇವೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು ಎಚ್. ವಿಶ್ವನಾಥ್.
ಇನ್ನು, ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು.
ಹೀಗೆ ಮುಂದುವರಿದ ಅವರು, ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಧಾನಪರಿಷತ್ಗೆ ರಾಜ್ಯಪಾಲರಿಂದ ನೇರವಾಗಿ ನಾಮನಿರ್ದೇಶನಗೊಂಡಿದ್ದ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಂ ಸಿದ್ದಿ ಮತ್ತು ಸಾಬಣ್ಣ ತಲವಾರ್ ಅವರು ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm