ಬ್ರೇಕಿಂಗ್ ನ್ಯೂಸ್
30-07-20 10:32 am News Correspondant ಕರ್ನಾಟಕ
ಬೆಂಗಳೂರು(ಜು.30): ನೂತನ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಮಾಡಿದರು. ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಎಂಎಲ್ಸಿ ಆಗಿ ಪ್ರಮಾನವಚನ ತೆಗೆದುಕೊಂಡ ಬಳಿಕ ಮಾತಾಡಿದ ಎಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಬೆಂಬಲಕ್ಕೆ ನಾವಿದ್ದೇವೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು ಎಚ್. ವಿಶ್ವನಾಥ್.
ಇನ್ನು, ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು.
ಹೀಗೆ ಮುಂದುವರಿದ ಅವರು, ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಧಾನಪರಿಷತ್ಗೆ ರಾಜ್ಯಪಾಲರಿಂದ ನೇರವಾಗಿ ನಾಮನಿರ್ದೇಶನಗೊಂಡಿದ್ದ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಂ ಸಿದ್ದಿ ಮತ್ತು ಸಾಬಣ್ಣ ತಲವಾರ್ ಅವರು ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
19-09-24 08:42 pm
Bangalore Correspondent
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
BJP MLA Munirathna, Rape Case; ಜಾತಿ ನಿಂದನೆ ಕೇ...
19-09-24 11:37 am
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 09:08 pm
Mangalore Correspondent
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
Mangalore Mayor elections 2024: ಮಂಗಳೂರು ಮಹಾನಗ...
18-09-24 10:45 pm
Mangalore, Lawrence D’Souza, congress Labour...
18-09-24 10:29 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm