ಬ್ರೇಕಿಂಗ್ ನ್ಯೂಸ್
30-07-20 10:32 am News Correspondant ಕರ್ನಾಟಕ
ಬೆಂಗಳೂರು(ಜು.30): ನೂತನ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಮಾಡಿದರು. ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಎಂಎಲ್ಸಿ ಆಗಿ ಪ್ರಮಾನವಚನ ತೆಗೆದುಕೊಂಡ ಬಳಿಕ ಮಾತಾಡಿದ ಎಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಬೆಂಬಲಕ್ಕೆ ನಾವಿದ್ದೇವೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು ಎಚ್. ವಿಶ್ವನಾಥ್.
ಇನ್ನು, ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು.
ಹೀಗೆ ಮುಂದುವರಿದ ಅವರು, ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಧಾನಪರಿಷತ್ಗೆ ರಾಜ್ಯಪಾಲರಿಂದ ನೇರವಾಗಿ ನಾಮನಿರ್ದೇಶನಗೊಂಡಿದ್ದ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಂ ಸಿದ್ದಿ ಮತ್ತು ಸಾಬಣ್ಣ ತಲವಾರ್ ಅವರು ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm