ಬ್ರೇಕಿಂಗ್ ನ್ಯೂಸ್
30-07-20 10:32 am News Correspondant ಕರ್ನಾಟಕ
ಬೆಂಗಳೂರು(ಜು.30): ನೂತನ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಮಾಡಿದರು. ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಎಂಎಲ್ಸಿ ಆಗಿ ಪ್ರಮಾನವಚನ ತೆಗೆದುಕೊಂಡ ಬಳಿಕ ಮಾತಾಡಿದ ಎಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಬೆಂಬಲಕ್ಕೆ ನಾವಿದ್ದೇವೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು ಎಚ್. ವಿಶ್ವನಾಥ್.
ಇನ್ನು, ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು.
ಹೀಗೆ ಮುಂದುವರಿದ ಅವರು, ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಧಾನಪರಿಷತ್ಗೆ ರಾಜ್ಯಪಾಲರಿಂದ ನೇರವಾಗಿ ನಾಮನಿರ್ದೇಶನಗೊಂಡಿದ್ದ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಂ ಸಿದ್ದಿ ಮತ್ತು ಸಾಬಣ್ಣ ತಲವಾರ್ ಅವರು ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am