ಬ್ರೇಕಿಂಗ್ ನ್ಯೂಸ್
11-05-21 02:51 pm Bangalore Correspondent ಕರ್ನಾಟಕ
Photo credits : ANI @ ANI
ಬೆಂಗಳೂರು, ಮೇ 11: ರಾಂಚಿಯ ಟಾಟಾನಗರದಿಂದ ರಾಜ್ಯಕ್ಕೆ ಆಕ್ಸಿಜನ್ ಕಂಟೇನರ್ಗಳನ್ನು ಹೊತ್ತ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಇಂದು (ಮಂಗಳವಾರ) ಬೆಂಗಳೂರು ತಲುಪಿದೆ.
ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು "ಆಕ್ಸಿಜನ್ ಎಕ್ಸ್ಪ್ರೆಸ್' ರೈಲು ಸೇವೆಯನ್ನು ಆರಂಭಿಸಿದ್ದು, ಸುಮಾರು 120 ಟನ್ ಆಕ್ಸಿಜನ್ ಹೊತ್ತ "ಆಕ್ಸಿಜನ್ ಎಕ್ಸ್ಪ್ರೆಸ್' ರೈಲು ಜೆಮ್ಶೆಡ್ಪುರ್ನಿಂದ ಸೋಮವಾರ ಹೊರಟಿತ್ತು. ಇಂದು ಬೆಂಗಳೂರಿನ ವೈಟ್ಫೀಲ್ಡ್ಗೆ ಆಗಮಿಸಿದೆ.

ಕರ್ನಾಟಕದಲ್ಲಿ ಸೋಮವಾರ 39,305 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 596 ಜನರು ಮೃತಪಟ್ಟಿದ್ದಾರೆ. ರಾಜ್ಯದ ದೈನಂದಿನ ಆಕ್ಸಿಜನ್ ಕೋಟಾವನ್ನು 1200 ಟನ್ ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿತ್ತು.
ಗುಜರಾತ್ನಿಂದ ಸೋಮವಾರ ಹೊರಡುವ ಮತ್ತೊಂದು ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಮಂಗಳವಾರ ದೆಹಲಿ ತಲುಪಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೋಮವಾರವೇ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಎಕ್ಸ್ಪ್ರೆಸ್ ರೈಲಿನ ಮೂಲಕ ಭಾರತೀಯ ರೈಲ್ವೆ ಇದುವರೆಗೂ 4,200 ಮೆಟ್ರಿಕ್ ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಅನ್ನು 268 ಟ್ಯಾಂಕರ್ಗಳ ಮೂಲಕ ದೇಶದ ವಿವಿಧ ರಾಜ್ಯಗಳಿಗೆ ಸಾಗಣೆ ಮಾಡಿದೆ.
ಭಾರತೀಯ ರೈಲ್ವೆ ನೀಡಿರುವ ಮಾಹಿತಿಯಂತೆ 68 ರೈಲುಗಳು ಇದುವರೆಗೂ ಪ್ರಯಾಣವನ್ನು ಪೂರ್ಣಗೊಳಿಸಿವೆ. ಮಹಾರಾಷ್ಟ್ರಕ್ಕೆ 293 ಮೆಟ್ರಿಕ್ ಟನ್, ಉತ್ತರ ಪ್ರದೇಶಕ್ಕೆ 1,230 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.
ಮಧ್ಯಪ್ರದೇಶಕ್ಕೆ 271 ಮೆಟ್ರಿಕ್ ಟನ್, ಹರಿಯಾಣಕ್ಕೆ 555 ಮೆಟ್ರಿಕ್ ಟನ್, ತೆಲಂಗಾಣಕ್ಕೆ 123 ಮೆಟ್ರಿಕ್ ಟನ್, ದೆಹಲಿಗೆ 1679 ಮತ್ತು ತೆಲಂಗಾಣಕ್ಕೆ 40 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, 120 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ 6 ಕಂಟೇನರ್ ಗಳು ಬೆಂಗಳೂರಿಗೆ ಬಂದು ತಲುಪಿದೆ. ಕೊರೊನಾ ವಿರುದ್ಧ ಹೋರಾಡಲು ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಪಿಯೂಶ್ ಗೋಯಲ್, ಡಿ.ವಿ ಸದಾನಂದ ಗೌಡ, ಪ್ರಲ್ಹಾದ್ ಜೋಶಿ ಅವರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.
120 MT ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್ಪ್ರೆಸ್ ಕರ್ನಾಟಕ ತಲುಪಿದೆ. ಈ ಸಕಾಲಿಕ ನೆರವಿಗಾಗಿ ಕೇಂದ್ರ ಸಚಿವರುಗಳಾದ @DVSadanandGowda, @JoshiPralhad ಮತ್ತು @PiyushGoyal ಅವರಿಗೆ ಹಾಗೂ ನಿರಂತರವಾಗಿ ನಮಗೆ ಬೆಂಬಲವಾಗಿ ನಿಂತಿರುವ ಪ್ರಧಾನಿ ಶ್ರೀ @narendramodi ಜೀ ಅವರಿಗೆ ಧನ್ಯವಾದಗಳು. #Unite2FightCorona pic.twitter.com/G5DPSOOSL7
— CM of Karnataka (@CMofKarnataka) May 11, 2021
The first 'Oxygen Express' to Karnataka with six cryogenic containers -- a total of 120 tonnes -- left Jamshedpur on Monday.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm