ಬ್ರೇಕಿಂಗ್ ನ್ಯೂಸ್
11-05-21 02:51 pm Bangalore Correspondent ಕರ್ನಾಟಕ
Photo credits : ANI @ ANI
ಬೆಂಗಳೂರು, ಮೇ 11: ರಾಂಚಿಯ ಟಾಟಾನಗರದಿಂದ ರಾಜ್ಯಕ್ಕೆ ಆಕ್ಸಿಜನ್ ಕಂಟೇನರ್ಗಳನ್ನು ಹೊತ್ತ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಇಂದು (ಮಂಗಳವಾರ) ಬೆಂಗಳೂರು ತಲುಪಿದೆ.
ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು "ಆಕ್ಸಿಜನ್ ಎಕ್ಸ್ಪ್ರೆಸ್' ರೈಲು ಸೇವೆಯನ್ನು ಆರಂಭಿಸಿದ್ದು, ಸುಮಾರು 120 ಟನ್ ಆಕ್ಸಿಜನ್ ಹೊತ್ತ "ಆಕ್ಸಿಜನ್ ಎಕ್ಸ್ಪ್ರೆಸ್' ರೈಲು ಜೆಮ್ಶೆಡ್ಪುರ್ನಿಂದ ಸೋಮವಾರ ಹೊರಟಿತ್ತು. ಇಂದು ಬೆಂಗಳೂರಿನ ವೈಟ್ಫೀಲ್ಡ್ಗೆ ಆಗಮಿಸಿದೆ.

ಕರ್ನಾಟಕದಲ್ಲಿ ಸೋಮವಾರ 39,305 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 596 ಜನರು ಮೃತಪಟ್ಟಿದ್ದಾರೆ. ರಾಜ್ಯದ ದೈನಂದಿನ ಆಕ್ಸಿಜನ್ ಕೋಟಾವನ್ನು 1200 ಟನ್ ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿತ್ತು.
ಗುಜರಾತ್ನಿಂದ ಸೋಮವಾರ ಹೊರಡುವ ಮತ್ತೊಂದು ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಮಂಗಳವಾರ ದೆಹಲಿ ತಲುಪಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೋಮವಾರವೇ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಎಕ್ಸ್ಪ್ರೆಸ್ ರೈಲಿನ ಮೂಲಕ ಭಾರತೀಯ ರೈಲ್ವೆ ಇದುವರೆಗೂ 4,200 ಮೆಟ್ರಿಕ್ ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಅನ್ನು 268 ಟ್ಯಾಂಕರ್ಗಳ ಮೂಲಕ ದೇಶದ ವಿವಿಧ ರಾಜ್ಯಗಳಿಗೆ ಸಾಗಣೆ ಮಾಡಿದೆ.
ಭಾರತೀಯ ರೈಲ್ವೆ ನೀಡಿರುವ ಮಾಹಿತಿಯಂತೆ 68 ರೈಲುಗಳು ಇದುವರೆಗೂ ಪ್ರಯಾಣವನ್ನು ಪೂರ್ಣಗೊಳಿಸಿವೆ. ಮಹಾರಾಷ್ಟ್ರಕ್ಕೆ 293 ಮೆಟ್ರಿಕ್ ಟನ್, ಉತ್ತರ ಪ್ರದೇಶಕ್ಕೆ 1,230 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.
ಮಧ್ಯಪ್ರದೇಶಕ್ಕೆ 271 ಮೆಟ್ರಿಕ್ ಟನ್, ಹರಿಯಾಣಕ್ಕೆ 555 ಮೆಟ್ರಿಕ್ ಟನ್, ತೆಲಂಗಾಣಕ್ಕೆ 123 ಮೆಟ್ರಿಕ್ ಟನ್, ದೆಹಲಿಗೆ 1679 ಮತ್ತು ತೆಲಂಗಾಣಕ್ಕೆ 40 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, 120 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ 6 ಕಂಟೇನರ್ ಗಳು ಬೆಂಗಳೂರಿಗೆ ಬಂದು ತಲುಪಿದೆ. ಕೊರೊನಾ ವಿರುದ್ಧ ಹೋರಾಡಲು ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಪಿಯೂಶ್ ಗೋಯಲ್, ಡಿ.ವಿ ಸದಾನಂದ ಗೌಡ, ಪ್ರಲ್ಹಾದ್ ಜೋಶಿ ಅವರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.
120 MT ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್ಪ್ರೆಸ್ ಕರ್ನಾಟಕ ತಲುಪಿದೆ. ಈ ಸಕಾಲಿಕ ನೆರವಿಗಾಗಿ ಕೇಂದ್ರ ಸಚಿವರುಗಳಾದ @DVSadanandGowda, @JoshiPralhad ಮತ್ತು @PiyushGoyal ಅವರಿಗೆ ಹಾಗೂ ನಿರಂತರವಾಗಿ ನಮಗೆ ಬೆಂಬಲವಾಗಿ ನಿಂತಿರುವ ಪ್ರಧಾನಿ ಶ್ರೀ @narendramodi ಜೀ ಅವರಿಗೆ ಧನ್ಯವಾದಗಳು. #Unite2FightCorona pic.twitter.com/G5DPSOOSL7
— CM of Karnataka (@CMofKarnataka) May 11, 2021
The first 'Oxygen Express' to Karnataka with six cryogenic containers -- a total of 120 tonnes -- left Jamshedpur on Monday.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm