ಬ್ರೇಕಿಂಗ್ ನ್ಯೂಸ್
11-05-21 07:27 pm Shivamogga Correspondent ಕರ್ನಾಟಕ
ಶಿವಮೊಗ್ಗ, ಮೇ 11; ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ 4 ದಿನ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ" ಎಂದರು.
ಈ ಅವಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ಥಬ್ತವಾಗಲಿದೆ. ಜಿಲ್ಲಾ ಕೈಗಾರಿಕಾ ಸಂಘ, ದಿನಸಿ ಸಗಟು ವ್ಯಾಪಾರಿಗಳ ಸಂಘ, ಗಾಂಧಿ ಬಜಾರ್ ವ್ಯಾಪಾರಿಗಳ ಸಂಘ ಮತ್ತು ಎಪಿಎಂಸಿ ಒಪ್ಪಿಗೆ ನೀಡಿದ್ದು ಸಹಕಾರ ನೀಡಲಿದ್ದಾರೆ" ಎಂದು ತಿಳಿಸಿದರು.
ಈ ಅವಧಿಯಲ್ಲಿ ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ನೆರೆಹೊರೆಯ ಅಗತ್ಯ ವಸ್ತುಗಳ ಅಂಗಡಿಗಳು, ಬ್ಯಾಂಕ್, ಸರ್ಕಾರಿ ಕಚೇರಿ, ಹೊಟೇಲ್ ಪಾರ್ಸೆಲ್ ಸೌಲಭ್ಯ, ಮೆಡಿಕಲ್ ಇತ್ಯಾದಿ ಸೌಲಭ್ಯಗಳಿಗೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು" ಎಂದು ಈಶ್ವರಪ್ಪ ಮನವಿ ಮಾಡಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೊರಬ ಮತ್ತು ಆನವಟ್ಟಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿವೆ. ಶಿವಮೊಗ್ಗ ನಗರದಲ್ಲಿ ಹೊಟೇಲ್ನಲ್ಲಿ ಐಸೋಲೇಶನ್ ಸೌಲಭ್ಯ ಬಯಸುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ" ಎಂದು ವಿವರಣೆ ನೀಡಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಥಂಬ್ ಇಂಪ್ರೆಷನ್ ನೀಡುವ ಮೊದಲು ಸ್ಯಾನಿಟೈಸ್ ಮಾಡಲು ಕಡ್ಡಾಯವಾಗಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ" ಎಂದರು.
Complete 4 days full lockdown to be imposed in Shivamogga from thursday to sunday said district incharge minister Eshwarappa.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm