ಬ್ರೇಕಿಂಗ್ ನ್ಯೂಸ್
11-05-21 07:27 pm Shivamogga Correspondent ಕರ್ನಾಟಕ
ಶಿವಮೊಗ್ಗ, ಮೇ 11; ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ 4 ದಿನ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ" ಎಂದರು.
ಈ ಅವಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ಥಬ್ತವಾಗಲಿದೆ. ಜಿಲ್ಲಾ ಕೈಗಾರಿಕಾ ಸಂಘ, ದಿನಸಿ ಸಗಟು ವ್ಯಾಪಾರಿಗಳ ಸಂಘ, ಗಾಂಧಿ ಬಜಾರ್ ವ್ಯಾಪಾರಿಗಳ ಸಂಘ ಮತ್ತು ಎಪಿಎಂಸಿ ಒಪ್ಪಿಗೆ ನೀಡಿದ್ದು ಸಹಕಾರ ನೀಡಲಿದ್ದಾರೆ" ಎಂದು ತಿಳಿಸಿದರು.
ಈ ಅವಧಿಯಲ್ಲಿ ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ನೆರೆಹೊರೆಯ ಅಗತ್ಯ ವಸ್ತುಗಳ ಅಂಗಡಿಗಳು, ಬ್ಯಾಂಕ್, ಸರ್ಕಾರಿ ಕಚೇರಿ, ಹೊಟೇಲ್ ಪಾರ್ಸೆಲ್ ಸೌಲಭ್ಯ, ಮೆಡಿಕಲ್ ಇತ್ಯಾದಿ ಸೌಲಭ್ಯಗಳಿಗೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು" ಎಂದು ಈಶ್ವರಪ್ಪ ಮನವಿ ಮಾಡಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೊರಬ ಮತ್ತು ಆನವಟ್ಟಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿವೆ. ಶಿವಮೊಗ್ಗ ನಗರದಲ್ಲಿ ಹೊಟೇಲ್ನಲ್ಲಿ ಐಸೋಲೇಶನ್ ಸೌಲಭ್ಯ ಬಯಸುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ" ಎಂದು ವಿವರಣೆ ನೀಡಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಥಂಬ್ ಇಂಪ್ರೆಷನ್ ನೀಡುವ ಮೊದಲು ಸ್ಯಾನಿಟೈಸ್ ಮಾಡಲು ಕಡ್ಡಾಯವಾಗಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ" ಎಂದರು.
Complete 4 days full lockdown to be imposed in Shivamogga from thursday to sunday said district incharge minister Eshwarappa.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm