ಬ್ರೇಕಿಂಗ್ ನ್ಯೂಸ್
11-05-21 07:27 pm Shivamogga Correspondent ಕರ್ನಾಟಕ
ಶಿವಮೊಗ್ಗ, ಮೇ 11; ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ 4 ದಿನ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ" ಎಂದರು.
ಈ ಅವಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ಥಬ್ತವಾಗಲಿದೆ. ಜಿಲ್ಲಾ ಕೈಗಾರಿಕಾ ಸಂಘ, ದಿನಸಿ ಸಗಟು ವ್ಯಾಪಾರಿಗಳ ಸಂಘ, ಗಾಂಧಿ ಬಜಾರ್ ವ್ಯಾಪಾರಿಗಳ ಸಂಘ ಮತ್ತು ಎಪಿಎಂಸಿ ಒಪ್ಪಿಗೆ ನೀಡಿದ್ದು ಸಹಕಾರ ನೀಡಲಿದ್ದಾರೆ" ಎಂದು ತಿಳಿಸಿದರು.
ಈ ಅವಧಿಯಲ್ಲಿ ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ನೆರೆಹೊರೆಯ ಅಗತ್ಯ ವಸ್ತುಗಳ ಅಂಗಡಿಗಳು, ಬ್ಯಾಂಕ್, ಸರ್ಕಾರಿ ಕಚೇರಿ, ಹೊಟೇಲ್ ಪಾರ್ಸೆಲ್ ಸೌಲಭ್ಯ, ಮೆಡಿಕಲ್ ಇತ್ಯಾದಿ ಸೌಲಭ್ಯಗಳಿಗೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು" ಎಂದು ಈಶ್ವರಪ್ಪ ಮನವಿ ಮಾಡಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೊರಬ ಮತ್ತು ಆನವಟ್ಟಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿವೆ. ಶಿವಮೊಗ್ಗ ನಗರದಲ್ಲಿ ಹೊಟೇಲ್ನಲ್ಲಿ ಐಸೋಲೇಶನ್ ಸೌಲಭ್ಯ ಬಯಸುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ" ಎಂದು ವಿವರಣೆ ನೀಡಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಥಂಬ್ ಇಂಪ್ರೆಷನ್ ನೀಡುವ ಮೊದಲು ಸ್ಯಾನಿಟೈಸ್ ಮಾಡಲು ಕಡ್ಡಾಯವಾಗಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ" ಎಂದರು.
Complete 4 days full lockdown to be imposed in Shivamogga from thursday to sunday said district incharge minister Eshwarappa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm