ಬ್ರೇಕಿಂಗ್ ನ್ಯೂಸ್
11-05-21 09:54 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 11: ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಗಣಿಸಿ ರಾಜ್ಯ ಸರಕಾರ ಎರಡು ಕೋಟಿ ಲಸಿಕೆಯನ್ನು ಪಡೆಯಲು ಮುಂದಾಗಿದೆ. ಇದಕ್ಕಾಗಿ ಜಾಗತಿಕ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಈಗಾಗ್ಲೇ 3 ಕೋಟಿ ಡೋಸ್ ಪಡೆಯಲು ಆರ್ಡರ್ ಮಾಡಿದ್ದೇವೆ. ಇದರಲ್ಲಿ ಒಂದು ಕೋಟಿ ಕೋವ್ಯಾಕ್ಸಿನ್ ಮತ್ತು ಎರಡು ಕೋಟಿ ಕೋವಿಶೀಲ್ಡ್ ಔಷಧಿ ಇರಲಿದೆ ಎಂದು ಹೇಳಿದ್ದಾರೆ.

ಡಿಸಿಎಂ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಮೀಟಿಂಗಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಔಷಧಿ ಖರೀದಿ ವಿಭಾಗಕ್ಕೆ ಮುಖ್ಯಸ್ಥರಾಗಿ ನಿಯೋಜನೆಗೊಂಡಿರುವ ಅಂಜುಂ ಪರ್ವೇಜ್, ರಾಜ್ಯ ಔಷಧಿ ಪೂರೈಕೆ ಕಂಪನಿ ಮ್ಯಾನೇಜಿಂಗ್ ಡೈರೆಕ್ಟರ್ ಲತಾ ಕುಮಾರ್, ಆರೋಗ್ಯ ಇಲಾಖೆ ನಿರ್ದೇಶಕ ಓಂಪ್ರಕಾಶ್ ಪಾಟೀಲ್ ಭಾಗವಹಿಸಿದ್ದರು.
ಈವರೆಗೆ ಕೇಂದ್ರ ಸರಕಾರದ ಮೂಲಕವೇ ಲಸಿಕೆ ಪೂರೈಕೆ ಆಗುತ್ತಿತ್ತು. ಯಾವುದೇ ಕಂಪನಿಯಿಂದ ನೇರವಾಗಿ ಖರೀದಿ ಮಾಡಿಲ್ಲ. ಆದರೆ, ಈಗ ನಾವು ಇದಕ್ಕಾಗಿ ಜಾಗತಿಕ ಟೆಂಡರ್ ಕರೆಯುತ್ತಿದ್ದೇವೆ. ಯಾವುದೇ ಕಂಪನಿಗಳಿಗೆ ಟೆಂಡರ್ ನಲ್ಲಿ ಭಾಗವಹಿಸಬಹುದು. ಏಳು ದಿನಗಳ ಒಳಗೆ ಈ ಪ್ರಕ್ರಿಯೆ ಪೂರೈಸುತ್ತೇವೆ. ಕಂಪನಿಗಳು ನೇರವಾಗಿ ಲಸಿಕೆ ಪೂರೈಕೆ ಮಾಡಬೇಕು ಎಂದು ಹೇಳಿದರು.
ನಗರ ಪ್ರದೇಶದವರು ಲಸಿಕೆ ಸಿಗುವುದಿಲ್ಲವೆಂದು ಗ್ರಾಮೀಣ ಪ್ರದೇಶಕ್ಕೆ ತೆರಳಬಾರದು. ಇದರಿಂದ ಗ್ರಾಮಾಂತರ ಪ್ರದೇಶದಲ್ಲಿ ತೊಂದರೆಯಾಗುವುದು. ನಗರ ಮತ್ತು ಗ್ರಾಮಾಂತರ ಎಲ್ಲ ಕಡೆಯೂ ಲಸಿಕೆ ಸಿಗುವಂತೆ ಮಾಡುತ್ತೇವೆ. ಈ ಬಗ್ಗೆ ಸಮಗ್ರವಾಗಿ ಮಾರ್ಗಸೂಚಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
Two crore COVID-19 vaccine doses will be procured through global tender in order to meet the increased demand and to facilitate vaccination of the age group of 18-44 years, Deputy Chief Minister and state COVID task force head CN Ashwath Narayan said on Tuesday. In addition to this, an order has already been been placed for three crore vaccine doses — one crore Covaxin and two crore Covishield, he said.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm