ಆಯುಷ್ಮಾನ್ ಭಾರತ್ ಅಡಿ ಕೋವಿಡ್ ಚಿಕಿತ್ಸೆ ನೀಡಿ, ಮತ್ತೆ ಯಾವ ಪುರುಷಾರ್ಥಕ್ಕೆ ಅದಿರೋದು ?

12-05-21 04:00 pm       Headline Karnataka News Network   ಕರ್ನಾಟಕ

ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Photo credits : indiatv

ಬೆಂಗಳೂರು, ಮೇ 12: ಕೋವಿಡ್ ಸೋಂಕಿತರಿಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಗ್ರಹಿಸಿರುವ ಕುಮಾರಸ್ವಾಮಿ, ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಪಟ್ಟಿಯಲ್ಲಿರುವ ಮಂದಿಗೆ 5 ಲಕ್ಷ ರೂಪಾಯಿ ವರೆಗೆ ಮಾರಣಾಂತಿಕ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಎಪಿಎಲ್ ಕಾರ್ಡುದಾರರಿಗೆ 5 ಲಕ್ಷ ರೂಪಾಯಿ ವರೆಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 30ರಷ್ಟು ರಿಯಾಯ್ತಿ ಸಿಗಲಿದೆ. ಯೋಜನೆ ವ್ಯಾಪ್ತಿಕ್ ಕೋವಿಡ್ ಕಾಯಿಲೆಯನ್ನೂ ಸೇರಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರಿಗೆ ಸರಾಗವಾಗಿ ಚಿಕಿತ್ಸೆ ಲಭಿಸುವುದಿಲ್ಲ ಎಂದಾದರೆ, ಈ ಯೋಜನೆ ಇರೋದಾದ್ರೂ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಈ ಬಗ್ಗೆ ಕೇಂದ್ರ ಸರಕಾರ ತಕ್ಷಣ ನಿರ್ಧಾರಕ್ಕೆ ಬಂದು ಆದೇಶ ಹೊರಡಿಸಬೇಕು. ದೇಶದ ಬಹುಸಂಖ್ಯಾತರಿಗೆ ಆಗ್ರಹ ಕೂಡ ಇದೆ ಎಂದಿದ್ದಾರೆ. 

Former CM HD Kumaraswamy urged Karnataka govt to provide free treatment to Covid-19 Patients under the Ayushman Bharat Health Scheme of the Central Government.