ಕಲಬುರಗಿ ; ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೊವಿಡ್ ಗೆ ಬಲಿ

13-05-21 01:39 pm       Headline Karnataka News Network   ಕರ್ನಾಟಕ

ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ. 

ಕಲಬುರಗಿ, ಮೇ 13 : ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ. 

ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.

ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಕಲಬುರಗಿ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.

Kalburgi Samuktha Karnataka Senior Journalist Jayatirtha dies of covid 19.