ಬ್ರೇಕಿಂಗ್ ನ್ಯೂಸ್
13-05-21 03:29 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13: ಆಕ್ಸಿಜನ್ ಕೊರತೆಯಿಂದ 24 ಜನರ ಸಾಮೂಹಿಕ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ ಹನ್ನೊಂದು ಮಂದಿ ಸಾವು ಕಂಡಿದ್ದಾರೆ.
ಈ ಬಗ್ಗೆ ಜಿಲ್ಲಾಸ್ಪತ್ರೆಯಿಂದ ಬುಲೆಟಿನ್ ನೀಡಲಾಗಿದ್ದು ಬುಧವಾರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆ ವರೆಗೆ 11 ಮಂದಿ ಕೊರೊನಾ ಸೋಂಕಿತರು ಸಾವು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ.

24 ಗಂಟೆ ಅವಧಿಯಲ್ಲಿ ಚಾಮರಾಜನಗರ ತಾಲ್ಲೂಕಿನ 9 ಮಂದಿ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಸಂಜೆಯಿಂದ ಗುರುವಾರ ಬೆಳಗ್ಗೆ 9 ಗಂಟೆಯ ನಡುವೆ ಮತ್ತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರಾಗಿದ್ದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿಗೆ ಗಡಿಯನ್ನು ಹೊಂದಿಕೊಂಡಿರುವ ಬಹುತೇಕ ಅರಣ್ಯ ಭಾಗವನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ದಿನವೂ ಸರಾಸರಿ ಹತ್ತು ಮಂದಿ ಸಾಯುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಸಾವಿನ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಿರುವುದು ಗ್ರಾಮೀಣ ಭಾಗದ ಜಿಲ್ಲೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ. ತಮಿಳು ಮತ್ತು ಮಲಯಾಳಿ ಭಾಷಿಗರು ಹೆಚ್ಚಿರುವ ಚಾಮರಾಜನಗರ ತಾಲೂಕಿನಲ್ಲೇ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ವೈದ್ಯಕೀಯ ಚಿಕಿತ್ಸೆಯ ವೈಫಲ್ಯವೋ, ಅಧಿಕಾರಿಗಳ ಅಸಡ್ಡೆಯೋ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.
Chamrajnagara reports 11 death of Covid-19 Patients in the last 24 hours resulting in major failure of administration. Recently 24 patients had died of oxygen shortage at the government hospital.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm