ಬ್ರೇಕಿಂಗ್ ನ್ಯೂಸ್
13-05-21 03:29 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13: ಆಕ್ಸಿಜನ್ ಕೊರತೆಯಿಂದ 24 ಜನರ ಸಾಮೂಹಿಕ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ ಹನ್ನೊಂದು ಮಂದಿ ಸಾವು ಕಂಡಿದ್ದಾರೆ.
ಈ ಬಗ್ಗೆ ಜಿಲ್ಲಾಸ್ಪತ್ರೆಯಿಂದ ಬುಲೆಟಿನ್ ನೀಡಲಾಗಿದ್ದು ಬುಧವಾರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆ ವರೆಗೆ 11 ಮಂದಿ ಕೊರೊನಾ ಸೋಂಕಿತರು ಸಾವು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ.
24 ಗಂಟೆ ಅವಧಿಯಲ್ಲಿ ಚಾಮರಾಜನಗರ ತಾಲ್ಲೂಕಿನ 9 ಮಂದಿ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಸಂಜೆಯಿಂದ ಗುರುವಾರ ಬೆಳಗ್ಗೆ 9 ಗಂಟೆಯ ನಡುವೆ ಮತ್ತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರಾಗಿದ್ದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದವರು ಸಾವನ್ನಪ್ಪಿದ್ದಾರೆ.
ತಮಿಳುನಾಡಿಗೆ ಗಡಿಯನ್ನು ಹೊಂದಿಕೊಂಡಿರುವ ಬಹುತೇಕ ಅರಣ್ಯ ಭಾಗವನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ದಿನವೂ ಸರಾಸರಿ ಹತ್ತು ಮಂದಿ ಸಾಯುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಸಾವಿನ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಿರುವುದು ಗ್ರಾಮೀಣ ಭಾಗದ ಜಿಲ್ಲೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ. ತಮಿಳು ಮತ್ತು ಮಲಯಾಳಿ ಭಾಷಿಗರು ಹೆಚ್ಚಿರುವ ಚಾಮರಾಜನಗರ ತಾಲೂಕಿನಲ್ಲೇ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ವೈದ್ಯಕೀಯ ಚಿಕಿತ್ಸೆಯ ವೈಫಲ್ಯವೋ, ಅಧಿಕಾರಿಗಳ ಅಸಡ್ಡೆಯೋ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.
Chamrajnagara reports 11 death of Covid-19 Patients in the last 24 hours resulting in major failure of administration. Recently 24 patients had died of oxygen shortage at the government hospital.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm