ಬ್ರೇಕಿಂಗ್ ನ್ಯೂಸ್
13-05-21 03:29 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13: ಆಕ್ಸಿಜನ್ ಕೊರತೆಯಿಂದ 24 ಜನರ ಸಾಮೂಹಿಕ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ ಹನ್ನೊಂದು ಮಂದಿ ಸಾವು ಕಂಡಿದ್ದಾರೆ.
ಈ ಬಗ್ಗೆ ಜಿಲ್ಲಾಸ್ಪತ್ರೆಯಿಂದ ಬುಲೆಟಿನ್ ನೀಡಲಾಗಿದ್ದು ಬುಧವಾರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆ ವರೆಗೆ 11 ಮಂದಿ ಕೊರೊನಾ ಸೋಂಕಿತರು ಸಾವು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ.

24 ಗಂಟೆ ಅವಧಿಯಲ್ಲಿ ಚಾಮರಾಜನಗರ ತಾಲ್ಲೂಕಿನ 9 ಮಂದಿ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಸಂಜೆಯಿಂದ ಗುರುವಾರ ಬೆಳಗ್ಗೆ 9 ಗಂಟೆಯ ನಡುವೆ ಮತ್ತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರಾಗಿದ್ದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿಗೆ ಗಡಿಯನ್ನು ಹೊಂದಿಕೊಂಡಿರುವ ಬಹುತೇಕ ಅರಣ್ಯ ಭಾಗವನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ದಿನವೂ ಸರಾಸರಿ ಹತ್ತು ಮಂದಿ ಸಾಯುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಸಾವಿನ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಿರುವುದು ಗ್ರಾಮೀಣ ಭಾಗದ ಜಿಲ್ಲೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ. ತಮಿಳು ಮತ್ತು ಮಲಯಾಳಿ ಭಾಷಿಗರು ಹೆಚ್ಚಿರುವ ಚಾಮರಾಜನಗರ ತಾಲೂಕಿನಲ್ಲೇ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ವೈದ್ಯಕೀಯ ಚಿಕಿತ್ಸೆಯ ವೈಫಲ್ಯವೋ, ಅಧಿಕಾರಿಗಳ ಅಸಡ್ಡೆಯೋ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.
Chamrajnagara reports 11 death of Covid-19 Patients in the last 24 hours resulting in major failure of administration. Recently 24 patients had died of oxygen shortage at the government hospital.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm