ಬ್ರೇಕಿಂಗ್ ನ್ಯೂಸ್
13-05-21 03:29 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13: ಆಕ್ಸಿಜನ್ ಕೊರತೆಯಿಂದ 24 ಜನರ ಸಾಮೂಹಿಕ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ ಹನ್ನೊಂದು ಮಂದಿ ಸಾವು ಕಂಡಿದ್ದಾರೆ.
ಈ ಬಗ್ಗೆ ಜಿಲ್ಲಾಸ್ಪತ್ರೆಯಿಂದ ಬುಲೆಟಿನ್ ನೀಡಲಾಗಿದ್ದು ಬುಧವಾರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆ ವರೆಗೆ 11 ಮಂದಿ ಕೊರೊನಾ ಸೋಂಕಿತರು ಸಾವು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ.

24 ಗಂಟೆ ಅವಧಿಯಲ್ಲಿ ಚಾಮರಾಜನಗರ ತಾಲ್ಲೂಕಿನ 9 ಮಂದಿ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಸಂಜೆಯಿಂದ ಗುರುವಾರ ಬೆಳಗ್ಗೆ 9 ಗಂಟೆಯ ನಡುವೆ ಮತ್ತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರಾಗಿದ್ದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿಗೆ ಗಡಿಯನ್ನು ಹೊಂದಿಕೊಂಡಿರುವ ಬಹುತೇಕ ಅರಣ್ಯ ಭಾಗವನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ದಿನವೂ ಸರಾಸರಿ ಹತ್ತು ಮಂದಿ ಸಾಯುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಸಾವಿನ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಿರುವುದು ಗ್ರಾಮೀಣ ಭಾಗದ ಜಿಲ್ಲೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ. ತಮಿಳು ಮತ್ತು ಮಲಯಾಳಿ ಭಾಷಿಗರು ಹೆಚ್ಚಿರುವ ಚಾಮರಾಜನಗರ ತಾಲೂಕಿನಲ್ಲೇ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ವೈದ್ಯಕೀಯ ಚಿಕಿತ್ಸೆಯ ವೈಫಲ್ಯವೋ, ಅಧಿಕಾರಿಗಳ ಅಸಡ್ಡೆಯೋ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.
Chamrajnagara reports 11 death of Covid-19 Patients in the last 24 hours resulting in major failure of administration. Recently 24 patients had died of oxygen shortage at the government hospital.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm