ಬ್ರೇಕಿಂಗ್ ನ್ಯೂಸ್
13-05-21 03:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದ್ದು, ಇದರಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಹೆಚ್ಚು ಸಾವು-ನೋವು ಸಂಭವಿಸುತ್ತಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರಿಂದ, ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಮತ್ತು ವೆಂಟಿಲೇಟರ್ ಸಮಸ್ಯೆಗಳು ಎದುರಾಗುತ್ತಿವೆ.


ಆದರೆ, ಬೆಂಗಳೂರು ನಗರ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ನೀಗಿಸಲು ಆಕ್ಸಿಜನ್ ಬಸ್ ಬಂದಿದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸೋಂಕಿತರ ಜೀವ ಉಳಿಸಲಿದೆ. ಅದರಂತಯೇ "ಆಕ್ಸಿಜನ್ ಆನ್ ವೀಲ್ಸ್' ಎಂಬ ವಿನೂತನ ಯೋಜನೆಯನ್ನು ಬಿಎಂಟಿಸಿ ಜಾರಿಗೆ ತಂದಿದೆ.
ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಫೌಂಡೇಶನ್ ಆಫ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ, ಬಿಎಂಟಿಸಿ ಸಂಸ್ಥೆಯು ಪ್ರಾಯೋಗಿಕವಾಗಿ, ಬಸ್ಸಿನಲ್ಲಿ 'ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನಲ್ಲಿ ಮೊಬೈಲ್ ಆಕ್ಸಿಜನ್ ಘಟಕವನ್ನು ಇಂದಿನಿಂದ (ಗುರುವಾರ) ಪ್ರಾರಂಭಿಸಿದೆ. ಕೋವಿಡ್ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.


ಆಕ್ಸಿಜನ್ ಬಸ್ಸಿನಲ್ಲಿ ಏನೆಲ್ಲಾ ಇರುತ್ತದೆ;
ಆಕ್ಸಿಜನ್ ಆನ್ ವೀಲ್ಸ್' ಎಂಬ ಹೆಸರಿನ ಬಸ್ಸಿನಲ್ಲಿ ಭರ್ತಿಯಾದ ಸಿಲಿಂಡರ್ ಇದ್ದು, ಅದಕ್ಕೆ ಬೇಕಾದ ಉಪಕರಣಗಳಿವೆ. ಬಸ್ಸಿನ ಸೀಟಿನಲ್ಲಿ ಸೋಂಕಿತ ಆರಾಮವಾಗಿ ಕುಳಿತುಕೊಳ್ಳಲು ಒಂದು ದಿಂಬು ಇಡಲಾಗಿದೆ.
ಕೊರೊನಾ ಸೋಂಕಿತರು ಬಂದ ತಕ್ಷಣ ನೀಡಲು ಫೇಸ್ ಶಿಲ್ಡ್ (ಮಾಸ್ಕ್) ಅನ್ನು ಸಹ ಬಸ್ಸಿನಲ್ಲಿ ಇರುತ್ತದೆ. ಬಿಎಂಟಿಸಿಯ ಈ ಬಸ್ಸಿನಲ್ಲಿ ಒಂದೇ ಬಾರಿಗೆ ಹತ್ತಕ್ಕೂ ಹೆಚ್ಚು ಜನ ಸೋಂಕಿತರು ಕುಳಿತುಕೊಳ್ಳಬಹುದು. ಪ್ರತಿ ಸೀಟಿಗೂ ಸಣ್ಣ ಸಣ್ಣ ಸಿಲಿಂಡರ್ ಅಳವಡಿಸಿದ್ದು, ಅಲ್ಲಿ ಆಕ್ಸಿಜನ್ ಅವಶ್ಯವಿದ್ದರೆ ಅದರ ಬಳಕೆ ಮಾಡಿಕೊಳ್ಳಬಹುದು.
Namma @BMTC_BENGALURU 's 'Oxygen on wheels' bus. It will be deployed near hospitals. pic.twitter.com/24dXNwrBvY
— ChristinMathewPhilip (@ChristinMP_TOI) May 12, 2021
The Karnataka government has launched the innovative OxyBus service to aid Covid-19 patients during emergencies. The government will be providing the OxyBus services free of cost.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm