ಬ್ರೇಕಿಂಗ್ ನ್ಯೂಸ್
13-05-21 05:28 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 13; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ದ್ವಿತೀಯ ಪಿಯುಸಿ ಬಳಿಕ ಈಗ ಎಸ್. ಎಸ್. ಎಲ್. ಸಿ. ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಜೂನ್ 21ರಿಂದ ಪರೀಕ್ಷೆಗಳು ನಡೆಯಬೇಕಿತ್ತು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ಈ ಕುರಿತು ಮಾಹಿತಿ ನೀಡಿದ್ದಾರೆ. "ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ" ಎಂದು ಹೇಳಿದ್ದಾರೆ.
"ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ವಿದ್ಯಾರ್ಥಿ, ಪೋಷಕರು, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿಕೊಂಡು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ" ಎಂದು ಸಚಿವರು ತಿಳಿಸಿದ್ದಾರೆ.
"ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ" ಎಂದು ಸಚಿವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಎಸ್. ಎಸ್. ಎಲ್. ಸಿ. ಪರೀಕ್ಷೆಯನ್ನು ಜೂನ್ 21ರಿಂದ ಜುಲೈ 5ರ ತನಕ ನಡೆಸಲಾಗುತ್ತದೆ ಎಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
ಕರ್ನಾಟಕದಲ್ಲಿ ಕೋವಿಡ್ ಹರಡುವಿಕೆ ತಡೆಯಲು 14 ದಿನಗಳ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಬುಧವಾರ ರಾಜ್ಯದಲ್ಲಿ 39,998 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 2053191ಕ್ಕೆ ಏರಿಕೆಯಾಗಿದೆ.
Amid the ongoing COVID-19 pandemic, the Karnataka Government has decided to postpone SSLC or Class 10 final exams.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm