ಬ್ರೇಕಿಂಗ್ ನ್ಯೂಸ್
13-05-21 05:28 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 13; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ದ್ವಿತೀಯ ಪಿಯುಸಿ ಬಳಿಕ ಈಗ ಎಸ್. ಎಸ್. ಎಲ್. ಸಿ. ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಜೂನ್ 21ರಿಂದ ಪರೀಕ್ಷೆಗಳು ನಡೆಯಬೇಕಿತ್ತು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ಈ ಕುರಿತು ಮಾಹಿತಿ ನೀಡಿದ್ದಾರೆ. "ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ" ಎಂದು ಹೇಳಿದ್ದಾರೆ.
"ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ವಿದ್ಯಾರ್ಥಿ, ಪೋಷಕರು, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿಕೊಂಡು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ" ಎಂದು ಸಚಿವರು ತಿಳಿಸಿದ್ದಾರೆ.

"ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ" ಎಂದು ಸಚಿವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಎಸ್. ಎಸ್. ಎಲ್. ಸಿ. ಪರೀಕ್ಷೆಯನ್ನು ಜೂನ್ 21ರಿಂದ ಜುಲೈ 5ರ ತನಕ ನಡೆಸಲಾಗುತ್ತದೆ ಎಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
ಕರ್ನಾಟಕದಲ್ಲಿ ಕೋವಿಡ್ ಹರಡುವಿಕೆ ತಡೆಯಲು 14 ದಿನಗಳ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಬುಧವಾರ ರಾಜ್ಯದಲ್ಲಿ 39,998 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 2053191ಕ್ಕೆ ಏರಿಕೆಯಾಗಿದೆ.
Amid the ongoing COVID-19 pandemic, the Karnataka Government has decided to postpone SSLC or Class 10 final exams.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm