ಬ್ರೇಕಿಂಗ್ ನ್ಯೂಸ್
14-05-21 05:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 14: ಹಿರಿಯ ಪತ್ರಕರ್ತ, ರಾಜಕೀಯ ವಿಶ್ಲೇಷಕರಾಗಿ ಹೆಸರು ಮಾಡಿದ್ದ ಮಹದೇವ ಪ್ರಕಾಶ್ (65) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸೋಂಕು ತಗುಲಿ ಕಳೆದ ಹತ್ತು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. 2019ರಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಾಗ ಮಹದೇವ ಪ್ರಕಾಶ್ ಅವರನ್ನು ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. ಒಂದು ವರ್ಷದ ಕಾಲ ಆ ಹುದ್ದೆಯಲ್ಲಿದ್ದ ಅವರು ಬಳಿಕ 2020ರ ನವೆಂಬರ್ ನಲ್ಲಿ ತಮ್ಮ ಸಂಪುಟ ದರ್ಜೆಯ ಹುದ್ದೆಗೆ ರಾಜಿನಾಮೆ ನೀಡಿ ಹೊರಬಂದಿದ್ದರು.
ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಮಹದೇವ ಪ್ರಸಾದ್ ನಿವೃತ್ತಿಯ ಬಳಿಕ ಈ ಭಾನುವಾರ ಹೆಸರಿನಲ್ಲಿ ಸ್ವಂತ ವಾರ ಪತ್ರಿಕೆಯನ್ನು ಹೊಂದಿದ್ದರು. ಅದರ ಜೊತೆಗೆ ವಿವಿಧ ಪತ್ರಿಕೆಗಳಿಗೆ ರಾಜಕೀಯ ಕುರಿತ ಅಂಕಣಗಳನ್ನು ಬರೆಯುತ್ತಿದ್ದರು. ಸುದ್ದಿ ವಾಹಿನಿಗಳಲ್ಲಿ ರಾಜಕೀಯ ಕುರಿತ ವಿಚಾರಗಳಲ್ಲಿ ಚರ್ಚೆಗೆ ಬರುತ್ತಿದ್ದರು. ಹೀಗಾಗಿ ರಾಜ್ಯದಲ್ಲಿ ಹಿರಿಯ ಪತ್ರಕರ್ತ ಎನ್ನುವ ನೆಲೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದರು.
ಸಿಎಂ ಯಡಿಯೂರಪ್ಪ ಜೊತೆಗೆ ನಿಕಟ ಒಡನಾಟ ಇರಿಸಿಕೊಂಡಿದ್ದ ಪ್ರಕಾಶ್, ತಮ್ಮ ಲೇಖನಗಳಲ್ಲಿ ಅವರ ಬಗ್ಗೆಯೂ ಟೀಕೆ, ಟಿಪ್ಪಣಿ ಮಾಡುತ್ತಿದ್ದರು. 25-30 ವರ್ಷಗಳ ಹಿಂದಿನ ರಾಜಕೀಯ ಚಿತ್ರಣಗಳನ್ನು ತಮ್ಮ ಲೇಖನದಲ್ಲಿ ಕಟ್ಚಿಕೊಡುತ್ತಿದ್ದುದು ಓದುಗರು ಮೆಚ್ಚುವಂತಾಗಿತ್ತು.
Karnataka CM'S Former Media advisor and senior Journalist Mahadev Prakash dies of Covid 19 in the hospital. 10 days ago he was tested positive and had been admitted to the hospital.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm