ಬ್ರೇಕಿಂಗ್ ನ್ಯೂಸ್
14-05-21 09:18 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 14: ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಕೊರೊನಾ ಲಸಿಕೆಗಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಘೋಷಿಸಿದೆ.
ಶುಕ್ರವಾರ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಈ ಘೋಷಣೆ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಲಸಿಕೆ ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಸಂಗ್ರಹಿಸಲು 100 ಕೋಟಿ ಯೋಜನೆ ರೂಪಿಸಿದ್ದೇವೆ. ಅವುಗಳನ್ನು ಖರೀದಿಸಿ ಕರ್ನಾಟಕದ ಜನರಿಗೆ ನೀಡಲು ಅನುಮತಿ ನೀಡಿ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಜನಸಾಮಾನ್ಯರಿಗೆ ಲಸಿಕೆ ಹಾಕಲು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಒಟ್ಟಾಗಿ ವಿಫಲವಾಗಿವೆ. ಈಗ ಅದನ್ನು ನಾವೇ ಮಾಡಲು ಬಯಸುತ್ತೇವೆ. ನಮಗೆ ಕೇವಲ ಎರಡು ಸಣ್ಣ ಅಗತ್ಯವಿದ್ದು, ಒಂದು ಕೇಂದ್ರ ಸರ್ಕಾರದಿಂದ, ಮತ್ತೊಂದು ರಾಜ್ಯ ಸರ್ಕಾರದಿಂದ ಅನುಮತಿ ಬೇಕಾಗಿದೆ ಎಂದರು.
ರಾಜಕೀಯವು ಈ ದಾರಿಯಲ್ಲಿ ಬರಲು ಬಿಡಬಾರದು ಎಂದು ಬಿಜೆಪಿಗೆ ನಾನು ಮನವಿ ಮಾಡುತ್ತೇನೆ. ಅವರ ಆತ್ಮನಿರ್ಭರ ಭಾರತ್ ಸಂಕಲ್ಪದಡಿಯಲ್ಲೇ, ಕಾಂಗ್ರೆಸ್ ಪಕ್ಷ ನೇರವಾಗಿ ಕೊರೊನಾ ಲಸಿಕೆ ಸಂಗ್ರಹಿಸಲು ಮತ್ತು ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.ಪ್ರಸ್ತುತ, ಭಾರತದಲ್ಲಿ ಲಸಿಕೆ ಖರೀದಿಗೆ ಕೇಂದ್ರ ಮತ್ತು ರಾಜ್ಯವನ್ನು ಅನುಮತಿ ನಿಯಮಗಳಿವೆ. ಲಸಿಕೆಗಳನ್ನು ನೇರವಾಗಿ ಸಂಗ್ರಹಿಸಲು ಸರ್ಕಾರವು ಆಸ್ಪತ್ರೆಗಳು ಮತ್ತು ಕೈಗಾರಿಕೆಗಳಿಗೆ ಈ ಅನುಮತಿಯನ್ನು ನೀಡಬೇಕೆಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.
ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭಿಸಲು ಕಾಂಗ್ರೆಸ್ 100 ಕೋಟಿ ರೂ. ಯೋಜನೆಯನ್ನು ಹೊಂದಿದೆ ಎಂದ ಡಿ.ಕೆ ಶಿವಕುಮಾರ್, ಅದರಲ್ಲಿ 10 ಕೋಟಿ ಹಣವನ್ನು ಕರ್ನಾಟಕ ಕಾಂಗ್ರೆಸ್ ಪಕ್ಷ ನೀಡುತ್ತಿದೆ. ಉಳಿದ ಹಣವನ್ನು ಕಾಂಗ್ರೆಸ್ ಶಾಸಕ/ ಎಂಎಲ್ಸಿಗಳ ನಿಧಿಯಿಂದ ಇನ್ನೂ 90 ಕೋಟಿ ರೂ. ಸಂಗ್ರಹಿಸಲು ನಾನು ಮನವಿ ಮಾಡುತ್ತೇನೆ ಎಂದರು.
The Karnataka Congress on Friday announced that it has prepared a ₹100 crore plan to procure COVID-19 vaccines directly from manufacturers and administer them to the people of Karnataka, KPCC president D.K. Shivakumar said in a press conference held alongside former Chief Minister and Leader of the Opposition Siddaramaiah.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm