ಬ್ರೇಕಿಂಗ್ ನ್ಯೂಸ್
17-05-21 12:03 pm Headline Karnataka News Network ಕರ್ನಾಟಕ
ಕಳಸ, ಮೇ 17 : ಕೊರೊನಾ ಸೋಂಕಿತನಾಗಿ, ಮನೆಯ ಜಗುಲಿಯಲ್ಲಿ ಮಲಗಿದ್ದ ಅಣ್ಣನನ್ನು ತಮ್ಮನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆಯ ಕಂಬಳಗದ್ದೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಹಾವೀರ (45) ಎಂಬಾತನಾಗಿದ್ದು ಆರೋಪಿಯನ್ನು ಪಾರ್ಶ್ವನಾಥ್ ಎಂದು ಗುರುತಿಸಲಾಗಿದೆ. ಮಹಾವೀರನಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯಲ್ಲಿ ನರ್ಸ್ ಮತ್ತು ವೈದ್ಯರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದ ಮಹಾವೀರ ಮನೆಗೆ ಬಂದು ಹೊರಗಡೆ ಜಗಲಿಯಲ್ಲಿ ಮಲಗಿದ್ದ. ತಮ್ಮ ಮನೆಗೆ ಬಂದಾಗ ಮನೆಯಲ್ಲಿ ಮಹಾವೀರ್ ಇರುವುದನ್ನು ಕಂಡು ಕೊರೊನಾ ಗುಣವಾಗದೆ ಯಾಕೆ ಮನೆಗೆ ಬಂದೆ ಎಂದು ಪಾರ್ಶ್ವನಾಥ್ ಪ್ರಶ್ನೆ ಮಾಡಿದ್ದಾನೆ.




ಕೊರೊನಾ ಗುಣವಾಗದೆ ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ಆಸ್ತಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಣ್ಣನನ್ನು ಸ್ವತಃ ತಮ್ಮನೇ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಯನ್ನು ಕಾಲಿನಿಂದ ಒತ್ತಿ ತಲೆ ಮತ್ತು ಮುಖವನ್ನು ಕತ್ತಿಯಿಂದ ಕೊಚ್ಚಿದ್ದಾನೆ. ಮನೆ ಮಂದಿ ಕತ್ತಿಯನ್ನು ಕಸಿದುಕೊಂಡಿದ್ದು ಅಲ್ಲಿಗೇ ಬಿಡದ ಪಾರ್ಶ್ವನಾಥ ಸೌದೆ ಕೊಟ್ಟಿಗೆಯಲ್ಲಿದ್ದ ಕೊಡಲಿಯನ್ನು ತಂದು ಅಣ್ಣನನ್ನೇ ಒಂದೇ ಏಟಿಗೆ ಕೊಚ್ಚಿ ಕೊಲೆ ಮಾಡುವ ಮೂಲಕ ಕೌರ್ಯ ಮೆರೆದಿದ್ದಾನೆ.
ತೀವ್ರವಾಗಿ ಗಾಯಗೊಂಡ ಮಹಾವೀರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Younger Brother kills own Eleder Brother who was covid positive for getting discharged from hospital without complete healing form Covid in Kalasa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm