ಬ್ರೇಕಿಂಗ್ ನ್ಯೂಸ್
17-05-21 12:03 pm Headline Karnataka News Network ಕರ್ನಾಟಕ
ಕಳಸ, ಮೇ 17 : ಕೊರೊನಾ ಸೋಂಕಿತನಾಗಿ, ಮನೆಯ ಜಗುಲಿಯಲ್ಲಿ ಮಲಗಿದ್ದ ಅಣ್ಣನನ್ನು ತಮ್ಮನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆಯ ಕಂಬಳಗದ್ದೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಹಾವೀರ (45) ಎಂಬಾತನಾಗಿದ್ದು ಆರೋಪಿಯನ್ನು ಪಾರ್ಶ್ವನಾಥ್ ಎಂದು ಗುರುತಿಸಲಾಗಿದೆ. ಮಹಾವೀರನಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯಲ್ಲಿ ನರ್ಸ್ ಮತ್ತು ವೈದ್ಯರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದ ಮಹಾವೀರ ಮನೆಗೆ ಬಂದು ಹೊರಗಡೆ ಜಗಲಿಯಲ್ಲಿ ಮಲಗಿದ್ದ. ತಮ್ಮ ಮನೆಗೆ ಬಂದಾಗ ಮನೆಯಲ್ಲಿ ಮಹಾವೀರ್ ಇರುವುದನ್ನು ಕಂಡು ಕೊರೊನಾ ಗುಣವಾಗದೆ ಯಾಕೆ ಮನೆಗೆ ಬಂದೆ ಎಂದು ಪಾರ್ಶ್ವನಾಥ್ ಪ್ರಶ್ನೆ ಮಾಡಿದ್ದಾನೆ.




ಕೊರೊನಾ ಗುಣವಾಗದೆ ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ಆಸ್ತಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಣ್ಣನನ್ನು ಸ್ವತಃ ತಮ್ಮನೇ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಯನ್ನು ಕಾಲಿನಿಂದ ಒತ್ತಿ ತಲೆ ಮತ್ತು ಮುಖವನ್ನು ಕತ್ತಿಯಿಂದ ಕೊಚ್ಚಿದ್ದಾನೆ. ಮನೆ ಮಂದಿ ಕತ್ತಿಯನ್ನು ಕಸಿದುಕೊಂಡಿದ್ದು ಅಲ್ಲಿಗೇ ಬಿಡದ ಪಾರ್ಶ್ವನಾಥ ಸೌದೆ ಕೊಟ್ಟಿಗೆಯಲ್ಲಿದ್ದ ಕೊಡಲಿಯನ್ನು ತಂದು ಅಣ್ಣನನ್ನೇ ಒಂದೇ ಏಟಿಗೆ ಕೊಚ್ಚಿ ಕೊಲೆ ಮಾಡುವ ಮೂಲಕ ಕೌರ್ಯ ಮೆರೆದಿದ್ದಾನೆ.
ತೀವ್ರವಾಗಿ ಗಾಯಗೊಂಡ ಮಹಾವೀರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Younger Brother kills own Eleder Brother who was covid positive for getting discharged from hospital without complete healing form Covid in Kalasa.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm