ಬ್ರೇಕಿಂಗ್ ನ್ಯೂಸ್
17-05-21 12:03 pm Headline Karnataka News Network ಕರ್ನಾಟಕ
ಕಳಸ, ಮೇ 17 : ಕೊರೊನಾ ಸೋಂಕಿತನಾಗಿ, ಮನೆಯ ಜಗುಲಿಯಲ್ಲಿ ಮಲಗಿದ್ದ ಅಣ್ಣನನ್ನು ತಮ್ಮನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆಯ ಕಂಬಳಗದ್ದೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಹಾವೀರ (45) ಎಂಬಾತನಾಗಿದ್ದು ಆರೋಪಿಯನ್ನು ಪಾರ್ಶ್ವನಾಥ್ ಎಂದು ಗುರುತಿಸಲಾಗಿದೆ. ಮಹಾವೀರನಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯಲ್ಲಿ ನರ್ಸ್ ಮತ್ತು ವೈದ್ಯರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದ ಮಹಾವೀರ ಮನೆಗೆ ಬಂದು ಹೊರಗಡೆ ಜಗಲಿಯಲ್ಲಿ ಮಲಗಿದ್ದ. ತಮ್ಮ ಮನೆಗೆ ಬಂದಾಗ ಮನೆಯಲ್ಲಿ ಮಹಾವೀರ್ ಇರುವುದನ್ನು ಕಂಡು ಕೊರೊನಾ ಗುಣವಾಗದೆ ಯಾಕೆ ಮನೆಗೆ ಬಂದೆ ಎಂದು ಪಾರ್ಶ್ವನಾಥ್ ಪ್ರಶ್ನೆ ಮಾಡಿದ್ದಾನೆ.




ಕೊರೊನಾ ಗುಣವಾಗದೆ ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ಆಸ್ತಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಣ್ಣನನ್ನು ಸ್ವತಃ ತಮ್ಮನೇ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಯನ್ನು ಕಾಲಿನಿಂದ ಒತ್ತಿ ತಲೆ ಮತ್ತು ಮುಖವನ್ನು ಕತ್ತಿಯಿಂದ ಕೊಚ್ಚಿದ್ದಾನೆ. ಮನೆ ಮಂದಿ ಕತ್ತಿಯನ್ನು ಕಸಿದುಕೊಂಡಿದ್ದು ಅಲ್ಲಿಗೇ ಬಿಡದ ಪಾರ್ಶ್ವನಾಥ ಸೌದೆ ಕೊಟ್ಟಿಗೆಯಲ್ಲಿದ್ದ ಕೊಡಲಿಯನ್ನು ತಂದು ಅಣ್ಣನನ್ನೇ ಒಂದೇ ಏಟಿಗೆ ಕೊಚ್ಚಿ ಕೊಲೆ ಮಾಡುವ ಮೂಲಕ ಕೌರ್ಯ ಮೆರೆದಿದ್ದಾನೆ.
ತೀವ್ರವಾಗಿ ಗಾಯಗೊಂಡ ಮಹಾವೀರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Younger Brother kills own Eleder Brother who was covid positive for getting discharged from hospital without complete healing form Covid in Kalasa.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm