ಬ್ರೇಕಿಂಗ್ ನ್ಯೂಸ್
17-05-21 12:03 pm Headline Karnataka News Network ಕರ್ನಾಟಕ
ಕಳಸ, ಮೇ 17 : ಕೊರೊನಾ ಸೋಂಕಿತನಾಗಿ, ಮನೆಯ ಜಗುಲಿಯಲ್ಲಿ ಮಲಗಿದ್ದ ಅಣ್ಣನನ್ನು ತಮ್ಮನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆಯ ಕಂಬಳಗದ್ದೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಹಾವೀರ (45) ಎಂಬಾತನಾಗಿದ್ದು ಆರೋಪಿಯನ್ನು ಪಾರ್ಶ್ವನಾಥ್ ಎಂದು ಗುರುತಿಸಲಾಗಿದೆ. ಮಹಾವೀರನಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯಲ್ಲಿ ನರ್ಸ್ ಮತ್ತು ವೈದ್ಯರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದ ಮಹಾವೀರ ಮನೆಗೆ ಬಂದು ಹೊರಗಡೆ ಜಗಲಿಯಲ್ಲಿ ಮಲಗಿದ್ದ. ತಮ್ಮ ಮನೆಗೆ ಬಂದಾಗ ಮನೆಯಲ್ಲಿ ಮಹಾವೀರ್ ಇರುವುದನ್ನು ಕಂಡು ಕೊರೊನಾ ಗುಣವಾಗದೆ ಯಾಕೆ ಮನೆಗೆ ಬಂದೆ ಎಂದು ಪಾರ್ಶ್ವನಾಥ್ ಪ್ರಶ್ನೆ ಮಾಡಿದ್ದಾನೆ.




ಕೊರೊನಾ ಗುಣವಾಗದೆ ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ಆಸ್ತಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಣ್ಣನನ್ನು ಸ್ವತಃ ತಮ್ಮನೇ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಯನ್ನು ಕಾಲಿನಿಂದ ಒತ್ತಿ ತಲೆ ಮತ್ತು ಮುಖವನ್ನು ಕತ್ತಿಯಿಂದ ಕೊಚ್ಚಿದ್ದಾನೆ. ಮನೆ ಮಂದಿ ಕತ್ತಿಯನ್ನು ಕಸಿದುಕೊಂಡಿದ್ದು ಅಲ್ಲಿಗೇ ಬಿಡದ ಪಾರ್ಶ್ವನಾಥ ಸೌದೆ ಕೊಟ್ಟಿಗೆಯಲ್ಲಿದ್ದ ಕೊಡಲಿಯನ್ನು ತಂದು ಅಣ್ಣನನ್ನೇ ಒಂದೇ ಏಟಿಗೆ ಕೊಚ್ಚಿ ಕೊಲೆ ಮಾಡುವ ಮೂಲಕ ಕೌರ್ಯ ಮೆರೆದಿದ್ದಾನೆ.
ತೀವ್ರವಾಗಿ ಗಾಯಗೊಂಡ ಮಹಾವೀರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Younger Brother kills own Eleder Brother who was covid positive for getting discharged from hospital without complete healing form Covid in Kalasa.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm