ಬ್ರೇಕಿಂಗ್ ನ್ಯೂಸ್
17-05-21 03:43 pm Headline Karnataka News Network ಕರ್ನಾಟಕ
Photo credits : Representative Image
ಬೀದರ್,ಮೇ 17: ಏಪ್ರಿಲ್ 1 ರಿಂದ ಮೇ 14 ವರೆಗೆ ಬಸವಕಲ್ಯಾಣ ಉಪಚುನಾವಣೆ ಹಾಗು ಬೀದರ್ ನಗರಸಭೆ ಚುನಾವಣಾ ಕರ್ತವ್ಯ ನಿರ್ವಹಿಸಿದ್ದ 52 ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಚುನಾವಣೆಯ ಕರ್ತವ್ಯಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕಿನ ಒಟ್ಟು 1,434 ಬೋಧಕ ಮತ್ತು ಬೋಧಕೇತರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಚುನಾವಣಾ ಕರ್ತವ್ಯಕ್ಕೂ ಮುನ್ನ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ 67 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇವರನ್ನು ಬಿಟ್ಟು ಉಳಿದವರನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಚುನಾವಣಾ ಕರ್ತವ್ಯ ಮುಗಿಸಿ ಬಂದ ಹಲವರಲ್ಲಿ ಸೋಂಕು ಕಾಣಿಸಿಕೊಂಡಿತ್ತು.

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದ 27 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಪೈಕಿ 16 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಬೀದರ್ ನಗರ ಸಭೆಯ ಚುನಾವಣಾ ಕಾರ್ಯನಿರ್ವಹಿಸಿದ್ದ 32 ಶಿಕ್ಷಕರಿಗೆ ಸೋಂಕು ತಗುಲಿದ್ದು, ಈ ಪೈಕಿ 18 ಜನ ಮೃತಪಟ್ಟಿದ್ದಾರೆ. ಹುಮ್ನಾಬಾದ್ನ 4, ಭಾಲ್ಕಿ ಹಾಗು ಔರಾದ್ನಲ್ಲಿ ತಲಾ 7 ಮಂದಿ ಸೇರಿ ಒಟ್ಟು 52 ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ 26 ಸೋಂಕಿತ ಶಿಕ್ಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ ಕೆಲವರು ಹೋಮ್ ಐಸೋಲೇಷನ್ನಲ್ಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಬೀದರ್ ಡಿಡಿಪಿಐ ಟಿ.ಆರ್.ದೊಡ್ಡೆ, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಚುನಾವಣೆ ನಡೆಸಲಾಗಿತ್ತು. ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು, ಸ್ಯಾನಿಟೈಸರ್ ಸಿಂಪಡಿಸಿಕೊಂಡು ಮತದಾನ ಮಾಡಿದ್ದಾರೆ. ಆದರೂ ಚುನಾವಣೆ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕು ಹೇಗೆ ತಗುಲಿತು ಎಂಬ ಪ್ರಶ್ನೆ ಕಾಡುತ್ತಿದೆ ಎಂದರು.
55 teachers who were on election duty have died of Covid-19 in Bidar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm