ಬ್ರೇಕಿಂಗ್ ನ್ಯೂಸ್
17-05-21 03:43 pm Headline Karnataka News Network ಕರ್ನಾಟಕ
Photo credits : Representative Image
ಬೀದರ್,ಮೇ 17: ಏಪ್ರಿಲ್ 1 ರಿಂದ ಮೇ 14 ವರೆಗೆ ಬಸವಕಲ್ಯಾಣ ಉಪಚುನಾವಣೆ ಹಾಗು ಬೀದರ್ ನಗರಸಭೆ ಚುನಾವಣಾ ಕರ್ತವ್ಯ ನಿರ್ವಹಿಸಿದ್ದ 52 ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಚುನಾವಣೆಯ ಕರ್ತವ್ಯಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕಿನ ಒಟ್ಟು 1,434 ಬೋಧಕ ಮತ್ತು ಬೋಧಕೇತರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಚುನಾವಣಾ ಕರ್ತವ್ಯಕ್ಕೂ ಮುನ್ನ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಈ ವೇಳೆ 67 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇವರನ್ನು ಬಿಟ್ಟು ಉಳಿದವರನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಚುನಾವಣಾ ಕರ್ತವ್ಯ ಮುಗಿಸಿ ಬಂದ ಹಲವರಲ್ಲಿ ಸೋಂಕು ಕಾಣಿಸಿಕೊಂಡಿತ್ತು.

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದ 27 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಪೈಕಿ 16 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಬೀದರ್ ನಗರ ಸಭೆಯ ಚುನಾವಣಾ ಕಾರ್ಯನಿರ್ವಹಿಸಿದ್ದ 32 ಶಿಕ್ಷಕರಿಗೆ ಸೋಂಕು ತಗುಲಿದ್ದು, ಈ ಪೈಕಿ 18 ಜನ ಮೃತಪಟ್ಟಿದ್ದಾರೆ. ಹುಮ್ನಾಬಾದ್ನ 4, ಭಾಲ್ಕಿ ಹಾಗು ಔರಾದ್ನಲ್ಲಿ ತಲಾ 7 ಮಂದಿ ಸೇರಿ ಒಟ್ಟು 52 ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ 26 ಸೋಂಕಿತ ಶಿಕ್ಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ ಕೆಲವರು ಹೋಮ್ ಐಸೋಲೇಷನ್ನಲ್ಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಬೀದರ್ ಡಿಡಿಪಿಐ ಟಿ.ಆರ್.ದೊಡ್ಡೆ, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಚುನಾವಣೆ ನಡೆಸಲಾಗಿತ್ತು. ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು, ಸ್ಯಾನಿಟೈಸರ್ ಸಿಂಪಡಿಸಿಕೊಂಡು ಮತದಾನ ಮಾಡಿದ್ದಾರೆ. ಆದರೂ ಚುನಾವಣೆ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕು ಹೇಗೆ ತಗುಲಿತು ಎಂಬ ಪ್ರಶ್ನೆ ಕಾಡುತ್ತಿದೆ ಎಂದರು.
55 teachers who were on election duty have died of Covid-19 in Bidar.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm