ಬ್ರೇಕಿಂಗ್ ನ್ಯೂಸ್
27-08-20 11:35 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 27: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕರಾವಳಿಯ ಶಾಸಕರು ಮನವಿ ಸಲ್ಲಿಸಿದ್ದಾರೆ.
ನಮ್ಮ ದೇಶದಲ್ಲಿನ ಬಹುತೇಕ ರಾಜ್ಯಗಳಲ್ಲಿ ತಮ್ಮ ತಮ್ಮ ರಾಜ್ಯದಲ್ಲಿನ ಉತ್ತಮ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಭಾಷೆಗಳನ್ನು ರಾಜ್ಯದ ಅದಿಕೃತ ಭಾಷೆಯನ್ನಾಗಿ ಸಂವಿಧಾನದ ಆರ್ಟಿಕಲ್ 345- ಬಿ ಪ್ರಕಾರ ಘೋಷಿಸಿಕೊಂಡಿದೆ. ಕಳೆದ 2011ನೇ ಜನಗಣತಿ ಪ್ರಕಾರ ಸುಮಾರು18.05 ಲಕ್ಷ ಜನರು ಅಧಿಕೃತವಾಗಿ ತುಳು ಭಾಷೆಯನ್ನು ಮಾತನಾಡುತ್ತಾರೆ.
ಕರ್ನಾಟಕ ತುಳು ಆಕಾಡೆಮಿ ಹಾಗೂ ತುಳು ಸಂಘ ಸಂಸ್ಥೆಗಳ ಪ್ರಕಾರ ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಸರಿ ಸುಮಾರು 40 ಲಕ್ಷಕ್ಕೂ ಅಧಿಕ ತುಳು ಭಾಷಿಕರಿದ್ದು ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸುಮಾರು ಒಂದುವರೆ ಕೋಟಿಗಿಂತಲೂ ಅಧಿಕ ತುಳು ಭಾಷಿಕರಿರುವುದನ್ನು ಗುರುತಿಸಲಾಗಿರುತ್ತದೆ.
ತಮ್ಮ ಅವಗಾಹಣೆಗಾಗಿ ಸಲ್ಲಿಸಿರುವ ಮಾಹಿತಿಗಳನ್ನು ಅವಲೋಕಿಸಿ ಸಕಾಲದಲ್ಲಿ ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆ ಎಂದು ಸಂವಿಧಾನದ ಆರ್ಟಿಕಲ್ 345 ರ ಪ್ರಕಾರ ಘೋಷಿಸಲು ರಾಜ್ಯ ಸರ್ಕಾರ ಅನುಸರಿಸಬೇಕಾದ ಮತ್ತು ಈಗಾಗಲೇ ಕೈಗೊಂಡ ಕ್ರಮಗಳೊಂದಿಗೆ ಸಾಂವಿಧಾನಿಕ ನೀತಿ ನಿಯಮಗಳ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರ ಅನುಮೋದನೆ ನೀಡುವಂತೆ ಆಗ್ರಹಿಸಬೇಕು. ಈ ಮೂಲಕ ತುಳುನಾಡಿನ ಸಮಸ್ತರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಬೇಕೆಂದು ಕರಾವಳಿ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತಾದ ಸಾಂವಿಧಾನಿಕ ಕಾನೂನುಗಳ ಪ್ರಕಾರ ಪ್ರಸ್ತಾವನೆ ಮಂಡಿಸಿ ಅನುಮೋದನೆಯನ್ನು ಪಡೆದು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮತ್ತು ಅಲ್ಲಿಂದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾಗಿ ಸಿಎಂ ಯಡಿಯೂರಪ್ಪ ಅವರನ್ನು ಕರಾವಳಿಯ ಶಾಸಕರು ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಪುತ್ತೂರು ಶಾಸಕರಾದ ಸಂಜೀವ ಮಟಂದೂರು, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಶಾಂತಾರಾಮ ಸಿದ್ದಿ ಉಪಸ್ಥಿತರಿದ್ದರು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm