ಬ್ರೇಕಿಂಗ್ ನ್ಯೂಸ್
19-05-21 11:34 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡಬೇಕು. ಸರಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಒಂದು ತಿಂಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿದಿನ ಹೆಚ್ಚಳವಾಗುತ್ತಿವೆ. ಆದುದರಿಂದ, ಮೇ 24ರ ಬಳಿಕವೂ ಸರಕಾರ ಲಾಕ್ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ ಎಂದರು.
ಒಂದು ವೇಳೆ ಸರಕಾರ ಲಾಕ್ಡೌನ್ ವಿಸ್ತರಣೆ ಮಾಡದೇ ಇದ್ದರೆ ದೊಡ್ಡ ಅನಾಹುತಗಳು ಸಂಭವಿಸಬಹುದು. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿಲ್ಲ. ಪರೀಕ್ಷೆಗಳು ಕಡಿಮೆ ಸಂಖ್ಯೆಯಲ್ಲಿ ಆಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಕಡಿಮೆ ಕಾಣಿಸುತ್ತಿದೆ. ಪರೀಕ್ಷೆಗಳ ಪ್ರಮಾಣ ಕಡಿಮೆ ಆಗುತ್ತಿರುವುದು ಆತಂಕಕಾರಿ ಎಂದು ಅವರು ಹೇಳಿದರು.
ರಾಜ್ಯ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರ ಜೀವದ ಜೊತೆ ಆಟವಾಡುತ್ತಿರುವುದು ಸರಿಯಲ್ಲ. ಈಗಾಗಲೇ ಈ ವಿಚಾರದಲ್ಲಿ ಸರಕಾರ ಸಾಕಷ್ಟು ಎಡವಿದೆ. ಇನ್ನು ಮುಂದೆಯೂ ಅದೇ ತಪ್ಪುಗಳನ್ನು ಪುನರಾವರ್ತನೆ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಈಗ ಜನರ ದಿಕ್ಕು ತಪ್ಪಿಸಲು ಹೋಗಿ ಮುಂದೆ ದೊಡ್ಡ ಅನಾಹುತಕ್ಕೆ ದಾರಿ ಮಾಡಿಕೊಡಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ
ಕೋವಿಡ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ. ಸೋಂಕಿಗೆ ಲಸಿಕೆ ಬಂದ ಆರಂಭದ ದಿನಗಳಲ್ಲಿ ಅದನ್ನು ಯಾರು ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಿ, ಈಗ ಲಸಿಕೆಯನ್ನು ಅವರದೇ ಪಕ್ಷದ ವತಿಯಿಂದ ಕೊಡಲು ಮುಂದಾಗಿದ್ದು ಅದರ ದ್ವಂದ್ವ ನೀತಿಯನ್ನು ತೋರಿಸುತ್ತದೆ. ಈ ಮೂಲಕ ಸಣ್ಣತನದ ರಾಜಕೀಯ ಮಾಡುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
HD Kumaraswamy says extend lockdown for a Month and provide a good package for the poor people in Karnataka.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm