ಬ್ರೇಕಿಂಗ್ ನ್ಯೂಸ್
19-05-21 11:34 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡಬೇಕು. ಸರಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಒಂದು ತಿಂಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿದಿನ ಹೆಚ್ಚಳವಾಗುತ್ತಿವೆ. ಆದುದರಿಂದ, ಮೇ 24ರ ಬಳಿಕವೂ ಸರಕಾರ ಲಾಕ್ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ ಎಂದರು.
ಒಂದು ವೇಳೆ ಸರಕಾರ ಲಾಕ್ಡೌನ್ ವಿಸ್ತರಣೆ ಮಾಡದೇ ಇದ್ದರೆ ದೊಡ್ಡ ಅನಾಹುತಗಳು ಸಂಭವಿಸಬಹುದು. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿಲ್ಲ. ಪರೀಕ್ಷೆಗಳು ಕಡಿಮೆ ಸಂಖ್ಯೆಯಲ್ಲಿ ಆಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಕಡಿಮೆ ಕಾಣಿಸುತ್ತಿದೆ. ಪರೀಕ್ಷೆಗಳ ಪ್ರಮಾಣ ಕಡಿಮೆ ಆಗುತ್ತಿರುವುದು ಆತಂಕಕಾರಿ ಎಂದು ಅವರು ಹೇಳಿದರು.
ರಾಜ್ಯ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರ ಜೀವದ ಜೊತೆ ಆಟವಾಡುತ್ತಿರುವುದು ಸರಿಯಲ್ಲ. ಈಗಾಗಲೇ ಈ ವಿಚಾರದಲ್ಲಿ ಸರಕಾರ ಸಾಕಷ್ಟು ಎಡವಿದೆ. ಇನ್ನು ಮುಂದೆಯೂ ಅದೇ ತಪ್ಪುಗಳನ್ನು ಪುನರಾವರ್ತನೆ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಈಗ ಜನರ ದಿಕ್ಕು ತಪ್ಪಿಸಲು ಹೋಗಿ ಮುಂದೆ ದೊಡ್ಡ ಅನಾಹುತಕ್ಕೆ ದಾರಿ ಮಾಡಿಕೊಡಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ
ಕೋವಿಡ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ. ಸೋಂಕಿಗೆ ಲಸಿಕೆ ಬಂದ ಆರಂಭದ ದಿನಗಳಲ್ಲಿ ಅದನ್ನು ಯಾರು ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಿ, ಈಗ ಲಸಿಕೆಯನ್ನು ಅವರದೇ ಪಕ್ಷದ ವತಿಯಿಂದ ಕೊಡಲು ಮುಂದಾಗಿದ್ದು ಅದರ ದ್ವಂದ್ವ ನೀತಿಯನ್ನು ತೋರಿಸುತ್ತದೆ. ಈ ಮೂಲಕ ಸಣ್ಣತನದ ರಾಜಕೀಯ ಮಾಡುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
HD Kumaraswamy says extend lockdown for a Month and provide a good package for the poor people in Karnataka.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm