ಬ್ರೇಕಿಂಗ್ ನ್ಯೂಸ್
19-05-21 12:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಣೆ ಮಾಡಿರುವ ನೆರವಿನ ಪ್ಯಾಕೇಜ್ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ.
ಯಾವುದೇ ಪೂರ್ವ ಯೋಜನೆ ಇಲ್ಲದೆ ತರಾತುರಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಷ್ಟು ಮಂದಿಗೆ ಎಷ್ಟೆಲ್ಲಾ ನಷ್ಟ ಆಗಿದೆ ಎನ್ನುವ ಬಗ್ಗೆ ಮಾಹಿತಿಯನ್ನೇ ಪಡೆಯದೆ ಜುಜುಬಿ ಪರಿಹಾರ ಘೋಷಣೆ ಮಾಡಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡೋಕೂ ಮುನ್ನ ಅಧ್ಯಯನ ನಡೆಸಬೇಕಿತ್ತು. ತೋರಿಕೆಗೆ ಪ್ಯಾಕೇಜ್ ಘೋಷಣೆ ಮಾಡಬಾರದು. ಸರಕಾರ ಭಿಕ್ಷೆ ನೀಡುವುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಕಳೆದ ಬಾರಿ ಮಾಡಿದ್ದ ಘೋಷಣೆಯೇ ಜನರಿಗೆ ತಲುಪಿಲ್ಲ. ಯಾರಿಗೆ ಎಷ್ಟು ಕೊಟ್ಟಿದ್ದೀರಿ ಎಂದು ಲೆಕ್ಕ ಕೊಡಿ. ಹೂವು ಬೆಳಗಾರರಿಗೆ ಕಳೆದ ಬಾರಿ ಹೆಕ್ಟೇರ್ ಗೆ 25 ಸಾವಿರ ರೂ.ನಂತೆ ಕೊಡುವುದಾಗಿ ಹೇಳಿದ್ದಿರಿ. ಎಷ್ಟು ಮಂದಿಗೆ ಸಿಕ್ಕಿದೆ, ಲೆಕ್ಕ ಕೊಡಿ. ಸರಕಾರದ ಆರ್ಥಿಕ ಪ್ಯಾಕೇಜ್ ಬರೀಯ ಬೋಗಸ್ ಎಂದು ಡಿಕೆಶಿ ಟೀಕಿಸಿದ್ದಾರೆ.


ಬಡವನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ !
ಸರಕಾರದ ಆರ್ಥಿಕ ಪ್ಯಾಕೇಜ್ ಬಡವರ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅಷ್ಟೇ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟೀಕಿಸಿದ್ದಾರೆ. ಇವರಿಗೆ ಬಡವರ ಬಗ್ಗೆ ಕಾಳಜಿ ಇರುತ್ತಿದ್ದರೆ ಈ ರೀತಿ ಜುಜುಬಿ ಪರಿಹಾರ ಘೋಷಣೆ ಮಾಡುತ್ತಿರಲಿಲ್ಲ. ಎರಡು ಸಾವಿರ, ಮೂರು ಸಾವಿರದಲ್ಲಿ ಜೀವನ ನಡೆಯುತ್ತಾ.. ಇವರಿಗೆ ಕನಿಷ್ಠ ಮಾಹಿತಿ ಇದ್ಯಾ.. ದಿನಕೂಲಿ ಮಾಡೋ ಮಂದಿಯ ಬಗ್ಗೆ ಇವರಿಗೆ ಮಾಹಿತಿಯೇ ಇಲ್ಲ.. ರಾಜ್ಯದ ಜನರ ಬಗ್ಗೆ ಸರಿಯಾದ ಮಾಹಿತಿಯೇ ಇವರ ಬಳಿ ಇಲ್ಲ. ಏನೋ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒಂದಷ್ಟು ಘೋಷಣೆ ಮಾಡಿದ್ದಾರೆ. ಸರಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ನಾನು ಕೂಡ ಸರಕಾರ ನಡೆಸಿದವನು. ಹಾಗೆ ನೋಡಿದರೆ ಕಳೆದ ಬಾರಿ ದೊಡ್ಡ ಕಷ್ಟವಾಗಿತ್ತು. ಈ ಬಾರಿ ಅಂಥ ಸ್ಥಿತಿ ಇಲ್ಲ. ಸರಕಾರ ಹೇಗೆ ನಡೆಸಬೇಕು, ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ಇವರು ಜುಜುಬಿ ಪರಿಹಾರ ನೀಡಿ ದುಡಿಯುವ ಜನರನ್ನು ಅಣಕಿಸಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm