ಬ್ರೇಕಿಂಗ್ ನ್ಯೂಸ್
19-05-21 12:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಣೆ ಮಾಡಿರುವ ನೆರವಿನ ಪ್ಯಾಕೇಜ್ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ.
ಯಾವುದೇ ಪೂರ್ವ ಯೋಜನೆ ಇಲ್ಲದೆ ತರಾತುರಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಷ್ಟು ಮಂದಿಗೆ ಎಷ್ಟೆಲ್ಲಾ ನಷ್ಟ ಆಗಿದೆ ಎನ್ನುವ ಬಗ್ಗೆ ಮಾಹಿತಿಯನ್ನೇ ಪಡೆಯದೆ ಜುಜುಬಿ ಪರಿಹಾರ ಘೋಷಣೆ ಮಾಡಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡೋಕೂ ಮುನ್ನ ಅಧ್ಯಯನ ನಡೆಸಬೇಕಿತ್ತು. ತೋರಿಕೆಗೆ ಪ್ಯಾಕೇಜ್ ಘೋಷಣೆ ಮಾಡಬಾರದು. ಸರಕಾರ ಭಿಕ್ಷೆ ನೀಡುವುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಕಳೆದ ಬಾರಿ ಮಾಡಿದ್ದ ಘೋಷಣೆಯೇ ಜನರಿಗೆ ತಲುಪಿಲ್ಲ. ಯಾರಿಗೆ ಎಷ್ಟು ಕೊಟ್ಟಿದ್ದೀರಿ ಎಂದು ಲೆಕ್ಕ ಕೊಡಿ. ಹೂವು ಬೆಳಗಾರರಿಗೆ ಕಳೆದ ಬಾರಿ ಹೆಕ್ಟೇರ್ ಗೆ 25 ಸಾವಿರ ರೂ.ನಂತೆ ಕೊಡುವುದಾಗಿ ಹೇಳಿದ್ದಿರಿ. ಎಷ್ಟು ಮಂದಿಗೆ ಸಿಕ್ಕಿದೆ, ಲೆಕ್ಕ ಕೊಡಿ. ಸರಕಾರದ ಆರ್ಥಿಕ ಪ್ಯಾಕೇಜ್ ಬರೀಯ ಬೋಗಸ್ ಎಂದು ಡಿಕೆಶಿ ಟೀಕಿಸಿದ್ದಾರೆ.
ಬಡವನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ !
ಸರಕಾರದ ಆರ್ಥಿಕ ಪ್ಯಾಕೇಜ್ ಬಡವರ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅಷ್ಟೇ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟೀಕಿಸಿದ್ದಾರೆ. ಇವರಿಗೆ ಬಡವರ ಬಗ್ಗೆ ಕಾಳಜಿ ಇರುತ್ತಿದ್ದರೆ ಈ ರೀತಿ ಜುಜುಬಿ ಪರಿಹಾರ ಘೋಷಣೆ ಮಾಡುತ್ತಿರಲಿಲ್ಲ. ಎರಡು ಸಾವಿರ, ಮೂರು ಸಾವಿರದಲ್ಲಿ ಜೀವನ ನಡೆಯುತ್ತಾ.. ಇವರಿಗೆ ಕನಿಷ್ಠ ಮಾಹಿತಿ ಇದ್ಯಾ.. ದಿನಕೂಲಿ ಮಾಡೋ ಮಂದಿಯ ಬಗ್ಗೆ ಇವರಿಗೆ ಮಾಹಿತಿಯೇ ಇಲ್ಲ.. ರಾಜ್ಯದ ಜನರ ಬಗ್ಗೆ ಸರಿಯಾದ ಮಾಹಿತಿಯೇ ಇವರ ಬಳಿ ಇಲ್ಲ. ಏನೋ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒಂದಷ್ಟು ಘೋಷಣೆ ಮಾಡಿದ್ದಾರೆ. ಸರಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ನಾನು ಕೂಡ ಸರಕಾರ ನಡೆಸಿದವನು. ಹಾಗೆ ನೋಡಿದರೆ ಕಳೆದ ಬಾರಿ ದೊಡ್ಡ ಕಷ್ಟವಾಗಿತ್ತು. ಈ ಬಾರಿ ಅಂಥ ಸ್ಥಿತಿ ಇಲ್ಲ. ಸರಕಾರ ಹೇಗೆ ನಡೆಸಬೇಕು, ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ಇವರು ಜುಜುಬಿ ಪರಿಹಾರ ನೀಡಿ ದುಡಿಯುವ ಜನರನ್ನು ಅಣಕಿಸಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದ್ದಾರೆ.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm