ಬ್ರೇಕಿಂಗ್ ನ್ಯೂಸ್
19-05-21 12:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಣೆ ಮಾಡಿರುವ ನೆರವಿನ ಪ್ಯಾಕೇಜ್ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ.
ಯಾವುದೇ ಪೂರ್ವ ಯೋಜನೆ ಇಲ್ಲದೆ ತರಾತುರಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಷ್ಟು ಮಂದಿಗೆ ಎಷ್ಟೆಲ್ಲಾ ನಷ್ಟ ಆಗಿದೆ ಎನ್ನುವ ಬಗ್ಗೆ ಮಾಹಿತಿಯನ್ನೇ ಪಡೆಯದೆ ಜುಜುಬಿ ಪರಿಹಾರ ಘೋಷಣೆ ಮಾಡಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡೋಕೂ ಮುನ್ನ ಅಧ್ಯಯನ ನಡೆಸಬೇಕಿತ್ತು. ತೋರಿಕೆಗೆ ಪ್ಯಾಕೇಜ್ ಘೋಷಣೆ ಮಾಡಬಾರದು. ಸರಕಾರ ಭಿಕ್ಷೆ ನೀಡುವುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಕಳೆದ ಬಾರಿ ಮಾಡಿದ್ದ ಘೋಷಣೆಯೇ ಜನರಿಗೆ ತಲುಪಿಲ್ಲ. ಯಾರಿಗೆ ಎಷ್ಟು ಕೊಟ್ಟಿದ್ದೀರಿ ಎಂದು ಲೆಕ್ಕ ಕೊಡಿ. ಹೂವು ಬೆಳಗಾರರಿಗೆ ಕಳೆದ ಬಾರಿ ಹೆಕ್ಟೇರ್ ಗೆ 25 ಸಾವಿರ ರೂ.ನಂತೆ ಕೊಡುವುದಾಗಿ ಹೇಳಿದ್ದಿರಿ. ಎಷ್ಟು ಮಂದಿಗೆ ಸಿಕ್ಕಿದೆ, ಲೆಕ್ಕ ಕೊಡಿ. ಸರಕಾರದ ಆರ್ಥಿಕ ಪ್ಯಾಕೇಜ್ ಬರೀಯ ಬೋಗಸ್ ಎಂದು ಡಿಕೆಶಿ ಟೀಕಿಸಿದ್ದಾರೆ.


ಬಡವನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ !
ಸರಕಾರದ ಆರ್ಥಿಕ ಪ್ಯಾಕೇಜ್ ಬಡವರ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅಷ್ಟೇ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟೀಕಿಸಿದ್ದಾರೆ. ಇವರಿಗೆ ಬಡವರ ಬಗ್ಗೆ ಕಾಳಜಿ ಇರುತ್ತಿದ್ದರೆ ಈ ರೀತಿ ಜುಜುಬಿ ಪರಿಹಾರ ಘೋಷಣೆ ಮಾಡುತ್ತಿರಲಿಲ್ಲ. ಎರಡು ಸಾವಿರ, ಮೂರು ಸಾವಿರದಲ್ಲಿ ಜೀವನ ನಡೆಯುತ್ತಾ.. ಇವರಿಗೆ ಕನಿಷ್ಠ ಮಾಹಿತಿ ಇದ್ಯಾ.. ದಿನಕೂಲಿ ಮಾಡೋ ಮಂದಿಯ ಬಗ್ಗೆ ಇವರಿಗೆ ಮಾಹಿತಿಯೇ ಇಲ್ಲ.. ರಾಜ್ಯದ ಜನರ ಬಗ್ಗೆ ಸರಿಯಾದ ಮಾಹಿತಿಯೇ ಇವರ ಬಳಿ ಇಲ್ಲ. ಏನೋ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒಂದಷ್ಟು ಘೋಷಣೆ ಮಾಡಿದ್ದಾರೆ. ಸರಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ನಾನು ಕೂಡ ಸರಕಾರ ನಡೆಸಿದವನು. ಹಾಗೆ ನೋಡಿದರೆ ಕಳೆದ ಬಾರಿ ದೊಡ್ಡ ಕಷ್ಟವಾಗಿತ್ತು. ಈ ಬಾರಿ ಅಂಥ ಸ್ಥಿತಿ ಇಲ್ಲ. ಸರಕಾರ ಹೇಗೆ ನಡೆಸಬೇಕು, ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ಇವರು ಜುಜುಬಿ ಪರಿಹಾರ ನೀಡಿ ದುಡಿಯುವ ಜನರನ್ನು ಅಣಕಿಸಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm