ಬ್ರೇಕಿಂಗ್ ನ್ಯೂಸ್
19-05-21 12:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಣೆ ಮಾಡಿರುವ ನೆರವಿನ ಪ್ಯಾಕೇಜ್ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ.
ಯಾವುದೇ ಪೂರ್ವ ಯೋಜನೆ ಇಲ್ಲದೆ ತರಾತುರಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಷ್ಟು ಮಂದಿಗೆ ಎಷ್ಟೆಲ್ಲಾ ನಷ್ಟ ಆಗಿದೆ ಎನ್ನುವ ಬಗ್ಗೆ ಮಾಹಿತಿಯನ್ನೇ ಪಡೆಯದೆ ಜುಜುಬಿ ಪರಿಹಾರ ಘೋಷಣೆ ಮಾಡಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡೋಕೂ ಮುನ್ನ ಅಧ್ಯಯನ ನಡೆಸಬೇಕಿತ್ತು. ತೋರಿಕೆಗೆ ಪ್ಯಾಕೇಜ್ ಘೋಷಣೆ ಮಾಡಬಾರದು. ಸರಕಾರ ಭಿಕ್ಷೆ ನೀಡುವುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಕಳೆದ ಬಾರಿ ಮಾಡಿದ್ದ ಘೋಷಣೆಯೇ ಜನರಿಗೆ ತಲುಪಿಲ್ಲ. ಯಾರಿಗೆ ಎಷ್ಟು ಕೊಟ್ಟಿದ್ದೀರಿ ಎಂದು ಲೆಕ್ಕ ಕೊಡಿ. ಹೂವು ಬೆಳಗಾರರಿಗೆ ಕಳೆದ ಬಾರಿ ಹೆಕ್ಟೇರ್ ಗೆ 25 ಸಾವಿರ ರೂ.ನಂತೆ ಕೊಡುವುದಾಗಿ ಹೇಳಿದ್ದಿರಿ. ಎಷ್ಟು ಮಂದಿಗೆ ಸಿಕ್ಕಿದೆ, ಲೆಕ್ಕ ಕೊಡಿ. ಸರಕಾರದ ಆರ್ಥಿಕ ಪ್ಯಾಕೇಜ್ ಬರೀಯ ಬೋಗಸ್ ಎಂದು ಡಿಕೆಶಿ ಟೀಕಿಸಿದ್ದಾರೆ.


ಬಡವನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ !
ಸರಕಾರದ ಆರ್ಥಿಕ ಪ್ಯಾಕೇಜ್ ಬಡವರ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅಷ್ಟೇ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟೀಕಿಸಿದ್ದಾರೆ. ಇವರಿಗೆ ಬಡವರ ಬಗ್ಗೆ ಕಾಳಜಿ ಇರುತ್ತಿದ್ದರೆ ಈ ರೀತಿ ಜುಜುಬಿ ಪರಿಹಾರ ಘೋಷಣೆ ಮಾಡುತ್ತಿರಲಿಲ್ಲ. ಎರಡು ಸಾವಿರ, ಮೂರು ಸಾವಿರದಲ್ಲಿ ಜೀವನ ನಡೆಯುತ್ತಾ.. ಇವರಿಗೆ ಕನಿಷ್ಠ ಮಾಹಿತಿ ಇದ್ಯಾ.. ದಿನಕೂಲಿ ಮಾಡೋ ಮಂದಿಯ ಬಗ್ಗೆ ಇವರಿಗೆ ಮಾಹಿತಿಯೇ ಇಲ್ಲ.. ರಾಜ್ಯದ ಜನರ ಬಗ್ಗೆ ಸರಿಯಾದ ಮಾಹಿತಿಯೇ ಇವರ ಬಳಿ ಇಲ್ಲ. ಏನೋ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒಂದಷ್ಟು ಘೋಷಣೆ ಮಾಡಿದ್ದಾರೆ. ಸರಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ನಾನು ಕೂಡ ಸರಕಾರ ನಡೆಸಿದವನು. ಹಾಗೆ ನೋಡಿದರೆ ಕಳೆದ ಬಾರಿ ದೊಡ್ಡ ಕಷ್ಟವಾಗಿತ್ತು. ಈ ಬಾರಿ ಅಂಥ ಸ್ಥಿತಿ ಇಲ್ಲ. ಸರಕಾರ ಹೇಗೆ ನಡೆಸಬೇಕು, ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ಇವರು ಜುಜುಬಿ ಪರಿಹಾರ ನೀಡಿ ದುಡಿಯುವ ಜನರನ್ನು ಅಣಕಿಸಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದ್ದಾರೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm