ಬ್ರೇಕಿಂಗ್ ನ್ಯೂಸ್
19-05-21 12:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಣೆ ಮಾಡಿರುವ ನೆರವಿನ ಪ್ಯಾಕೇಜ್ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ.
ಯಾವುದೇ ಪೂರ್ವ ಯೋಜನೆ ಇಲ್ಲದೆ ತರಾತುರಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಷ್ಟು ಮಂದಿಗೆ ಎಷ್ಟೆಲ್ಲಾ ನಷ್ಟ ಆಗಿದೆ ಎನ್ನುವ ಬಗ್ಗೆ ಮಾಹಿತಿಯನ್ನೇ ಪಡೆಯದೆ ಜುಜುಬಿ ಪರಿಹಾರ ಘೋಷಣೆ ಮಾಡಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡೋಕೂ ಮುನ್ನ ಅಧ್ಯಯನ ನಡೆಸಬೇಕಿತ್ತು. ತೋರಿಕೆಗೆ ಪ್ಯಾಕೇಜ್ ಘೋಷಣೆ ಮಾಡಬಾರದು. ಸರಕಾರ ಭಿಕ್ಷೆ ನೀಡುವುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಕಳೆದ ಬಾರಿ ಮಾಡಿದ್ದ ಘೋಷಣೆಯೇ ಜನರಿಗೆ ತಲುಪಿಲ್ಲ. ಯಾರಿಗೆ ಎಷ್ಟು ಕೊಟ್ಟಿದ್ದೀರಿ ಎಂದು ಲೆಕ್ಕ ಕೊಡಿ. ಹೂವು ಬೆಳಗಾರರಿಗೆ ಕಳೆದ ಬಾರಿ ಹೆಕ್ಟೇರ್ ಗೆ 25 ಸಾವಿರ ರೂ.ನಂತೆ ಕೊಡುವುದಾಗಿ ಹೇಳಿದ್ದಿರಿ. ಎಷ್ಟು ಮಂದಿಗೆ ಸಿಕ್ಕಿದೆ, ಲೆಕ್ಕ ಕೊಡಿ. ಸರಕಾರದ ಆರ್ಥಿಕ ಪ್ಯಾಕೇಜ್ ಬರೀಯ ಬೋಗಸ್ ಎಂದು ಡಿಕೆಶಿ ಟೀಕಿಸಿದ್ದಾರೆ.


ಬಡವನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ !
ಸರಕಾರದ ಆರ್ಥಿಕ ಪ್ಯಾಕೇಜ್ ಬಡವರ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅಷ್ಟೇ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟೀಕಿಸಿದ್ದಾರೆ. ಇವರಿಗೆ ಬಡವರ ಬಗ್ಗೆ ಕಾಳಜಿ ಇರುತ್ತಿದ್ದರೆ ಈ ರೀತಿ ಜುಜುಬಿ ಪರಿಹಾರ ಘೋಷಣೆ ಮಾಡುತ್ತಿರಲಿಲ್ಲ. ಎರಡು ಸಾವಿರ, ಮೂರು ಸಾವಿರದಲ್ಲಿ ಜೀವನ ನಡೆಯುತ್ತಾ.. ಇವರಿಗೆ ಕನಿಷ್ಠ ಮಾಹಿತಿ ಇದ್ಯಾ.. ದಿನಕೂಲಿ ಮಾಡೋ ಮಂದಿಯ ಬಗ್ಗೆ ಇವರಿಗೆ ಮಾಹಿತಿಯೇ ಇಲ್ಲ.. ರಾಜ್ಯದ ಜನರ ಬಗ್ಗೆ ಸರಿಯಾದ ಮಾಹಿತಿಯೇ ಇವರ ಬಳಿ ಇಲ್ಲ. ಏನೋ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒಂದಷ್ಟು ಘೋಷಣೆ ಮಾಡಿದ್ದಾರೆ. ಸರಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ನಾನು ಕೂಡ ಸರಕಾರ ನಡೆಸಿದವನು. ಹಾಗೆ ನೋಡಿದರೆ ಕಳೆದ ಬಾರಿ ದೊಡ್ಡ ಕಷ್ಟವಾಗಿತ್ತು. ಈ ಬಾರಿ ಅಂಥ ಸ್ಥಿತಿ ಇಲ್ಲ. ಸರಕಾರ ಹೇಗೆ ನಡೆಸಬೇಕು, ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ಇವರು ಜುಜುಬಿ ಪರಿಹಾರ ನೀಡಿ ದುಡಿಯುವ ಜನರನ್ನು ಅಣಕಿಸಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm