ಬ್ರೇಕಿಂಗ್ ನ್ಯೂಸ್
21-05-21 01:00 pm Headline Karnataka News Network ಕರ್ನಾಟಕ
Photo credits : Representative Image
ಬೆಂಗಳೂರು, ಮೇ 21: ಲಸಿಕೆ ಸಂಗ್ರಹದ ಕೊರತೆಯಿಂದಾಗಿ 18ರಿಂದ 44 ವಯಸ್ಸಿನ ಒಳಗಿನವರಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಇದೀಗ 44 ವರ್ಷದ ಒಳಗಿನ ಫ್ರಂಟ್ ಲೈನ್ ಕಾರ್ಯಕರ್ತರನ್ನು ಗುರುತಿಸಿ ಲಸಿಕೆ ನೀಡುವಂತೆ ಆರೋಗ್ಯ ಇಲಾಖೆ ಹೊಸ ಆದೇಶ ಹೊರಡಿಸಿದೆ.
ಇದಕ್ಕಾಗಿ ಪ್ರತಿ ಜಿಲ್ಲೆಗೂ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದ್ದು, ಯಾರಿಗೆ ಮೊದಲು ಲಸಿಕೆ ನೀಡಬೇಕೆಂದು ಅವರೇ ನಿರ್ಧರಿಸಲಿದ್ದಾರೆ. ಅಲ್ಲದೆ, ಎಲ್ಲಿ ಲಸಿಕೆ ನೀಡಬೇಕು, ಯಾವ ವಿಭಾಗದವರಿಗೆ ಎಲ್ಲಿ ಲಸಿಕಾ ಕೇಂದ್ರ, ಯಾವಾಗ ನೀಡಲಾಗುತ್ತದೆ ಎನ್ನುವ ಬಗ್ಗೆಯೂ ಆಯಾ ಜಿಲ್ಲೆಯ ನೋಡಲ್ ಅಧಿಕಾರಿ ನಿರ್ಧರಿಸಲಿದ್ದಾರೆ.


ಆದ್ಯತಾ ವಲಯವೆಂದು ಕೆಲವು ವಿಭಾಗದ ಮಂದಿಯನ್ನು ಗುರುತಿಸಲಾಗಿದ್ದು ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಪ್ರತೀ ಜಿಲ್ಲಾಡಳಿತಕ್ಕೂ ಪ್ರತ್ಯೇಕ ನಿರ್ದೇಶನ ನೀಡಲಾಗಿದೆ. ಆದ್ಯತಾ ವಲಯದಲ್ಲಿ ಅಂಗವಿಕಲರು, ಅವರನ್ನು ನೋಡಿಕೊಳ್ಳುವ ಶುಶ್ರೂಷಕಿಯರು, ಜೈಲು ಸಿಬಂದಿ, ಸ್ಮಶಾನಗಳಲ್ಲಿ ಕೆಲಸ ಮಾಡುವ ಸಿಬಂದಿ, ಆರೋಗ್ಯ ಕಾರ್ಯಕರ್ತರ ಕುಟುಂಸ್ಥರು, ಕೊರೊನಾ ಕೆಲಸಕ್ಕೆ ನಿಯುಕ್ತರಾಗಿರುವ ಶಿಕ್ಷಕರು, ಸರಕಾರಿ ಸಾರಿಗೆ ನೌಕರರು, ಆಟೋ ಮತ್ತು ಕ್ಯಾಬ್ ಚಾಲಕರು, ವಿದ್ಯುತ್ ಮತ್ತು ನೀರು ಸರಬರಾಜು ಇಲಾಖೆಯ ಸಿಬಂದಿ, ಬೀದಿ ವ್ಯಾಪಾರಸ್ಥರು, ಅಂಚೆ ನೌಕರರು, ಸೆಕ್ಯುರಿಟಿ ಗಾರ್ಡ್, ಕಚೇರಿಗಳಲ್ಲಿ ಕ್ಲೀನಿಂಗ್ ಕೆಲಸ ಮಾಡುವ ಸಿಬಂದಿ, ನ್ಯಾಯಾಲಯ ಸಿಬಂದಿ, ಹಿರಿಯರು ಅಥವಾ ರೋಗ ಪೀಡಿತರನ್ನು ನೋಡಿಕೊಳ್ಳುವ ಮಂದಿ, ಮಕ್ಕಳು ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಿಬಂದಿ, ಪೆಟ್ರೋಲ್ ಪಂಪ್ ಮತ್ತು ಗ್ಯಾಸ್ ವಿತರಕ ಸಿಬಂದಿ, ಮೆಡಿಕಲ್ ಶಾಪ್ ಗಳಲ್ಲಿ ಕೆಲಸ ಮಾಡುವ ಸಿಬಂದಿ, ಎಪಿಎಂಸಿ ಇನ್ನಿತರ ತರಕಾರಿ, ದಿನಸಿ ಮಾರುಕಟ್ಟೆಗಳಲ್ಲಿ ಕೆಲಸ ಮಾಡುವ ಸಿಬಂದಿಯನ್ನು ಗುರುತಿಸಿ ಆದ್ಯತೆಯ ನೆಲೆಯಲ್ಲಿ ಲಸಿಕೆ ನೀಡುವಂತೆ ನಿರ್ದೇಶನ ನೀಡಲಾಗಿದೆ.

ಇದರ ಜೊತೆಗೆ ಕಟ್ಟಡ ನಿರ್ಮಾಣ ಕಾರ್ಮಿಕರು, ಟೆಲಿಕಾಂ ಸಿಬಂದಿ, ಬ್ಯಾಂಕ್ ನೌಕರರು, ವಕೀಲರು, ಚಿತ್ರೋದ್ಯಮದಲ್ಲಿ ತೊಡಗಿರುವ ಸಿಬಂದಿ, ಹೊಟೇಲ್ ನೌಕರರು, ಕೆಎಂಎಫ್ ಸಿಬಂದಿ, ಗಾರ್ಮೆಂಟ್ ನೌಕರರು, ರೈಲ್ವೇ ಸಿಬಂದಿ, ಕ್ರೀಡಾಪಟುಗಳು ಮತ್ತು ರಾಜ್ಯ ಹಾಗೂ ದೇಶವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು, ಗೈಲ್ ಮತ್ತು ಎಚ್ಎಎಲ್ ಸಿಬಂದಿ ಹೀಗೆ ಹಲವು ಸ್ತರದಲ್ಲಿ ಕೆಲಸ ಮಾಡುವ ಮಂದಿಯನ್ನು ಗುರುತಿಸಿ ಮೊದಲಿಗೆ ಲಸಿಕೆ ನೀಡಲು ಆದೇಶ ಮಾಡಲಾಗಿದೆ. ಮೇ 22ರಿಂದಲೇ ಈ ಆದ್ಯತಾ ವಲಯವನ್ನು ಗುರುತಿಸಿ ಲಸಿಕೆ ನೀಡಲು ತೊಡಗಿಸಿಕೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
Karnataka will resume vaccination for the 18-44 age group from May 22, but initially, only for priority groups within this bracket, the Health Department has said. In an announcement made on May 22, the Karnataka Health Department said in a tweet, “Vaccination for 18-44 years age group is being resumed from 22.5.2021 and state procured vaccines will be utilized to vaccinate the eligible beneficiaries.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm