ಬ್ರೇಕಿಂಗ್ ನ್ಯೂಸ್
28-08-20 02:45 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿರುದ್ಧದ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ. ಜಾರ್ಜ್ಗೆ ಮತ್ತೆ ಸಂಕಷ್ಟ ಎದುರಾಗಿದೆ.
ನ್ಯಾಯಾಧೀಶ ತ್ಯಾಜರಾಜ್ ಎನ್. ಇನವಳ್ಳಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದ್ದಾರೆ. ಈ ಪ್ರಕರಣದ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ. ಕೆ.ಜೆ.ಜಾರ್ಜ್, ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ರಾಜ್ಯದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ನಂತರದಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೆಹಾಲ್ ಗಣಪತಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಾದ- ಪ್ರತಿವಾದ ಆಲಿಸಿದ ನ್ಯಾಯಾಪೀಠ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ.ಚಾರ್ಜ್, ಎ.ಎಂ ಪ್ರಸಾದ್, ಪ್ರಣಬ್ ಮೊಹಾಂತಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಗಣಪತಿ ಅವರ ಸಾವಿನ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿರುವುದಕ್ಕೆ ವಿಶೇಷ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಆತ್ಮಹತ್ಯೆ ಪ್ರಚೋದನೆಗೆ ಸಾಕಷ್ಟು ಸಾಕ್ಷಿಗಳಿದ್ದರೂ ಬಿ ರಿಪೋರ್ಟ್ ನೀಡಿರುವುದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm