ಬ್ರೇಕಿಂಗ್ ನ್ಯೂಸ್
22-05-21 11:46 am Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಮೇ 21: ಕೊರೊನಾ ವೈರಸ್ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗೀ ಆ್ಯಂಬುಲೆನ್ಸ್ಗಳು ಅಕ್ಷರಶಃ ಸುಲಿಗೆಗೆ ಇಳಿದಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾಸಗೀ ಆ್ಯಂಬುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ.
ಎರಡು ವಿಭಾಗದಲ್ಲಿ ಆ್ಯಂಬುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದೆ. ಸಾಮಾನ್ಯ ಆ್ಯಂಬುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆ್ಯಂಬುಲೆನ್ಸ್)ಮೊದಲ 10 ಕಿ.ಮೀಟರ್ಗಳಿಗೆ 1500 ರೂಪಾಯಿ ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. 10 ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ 120 ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ಗಂಟೆಗೆ 200 ರೂಪಾಯಿ ವೈಟಿಂಗ್ ಚಾರ್ಜ್ ಎಂದು ನಿಗದಿಗೊಳಿಸಲಾಗಿದೆ.



ಇನ್ನು ಬೇಸಿಕ್ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್(ಬಿಎಲ್ಎಸ್)ಗಳಿಗೆ ಮೊದಲ 10 ಕಿಮೀಗಳಿಗೆ 2000 ರೂಪಾಯಿ ನಿಗದಿಗೊಳಿಸಿದ್ದು 10 ಕಿಮೀ ನಂತರದ ಪ್ರಯಾಣಕ್ಕೆ ಪ್ರತಿ ಕಿಮೀಗೆ ಗರಿಷ್ಟ 120 ರೂಪಾಯಿ ವಿಧಿಸಲು ಅವಕಾಶ ನೀಡಲಾಗಿದೆ. ಇದು ಕೂಡ ದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ವೈಟಿಂಗ್ ಚಾರ್ಚ್ ಗಂಟೆಗೆ 250 ರೂ ನಿಗದಿಗೊಳಿಸಿದೆ.

ಈ ದರ ನಿಗದಿಪಡಿಸಲು ನೋಂದಣಿ ವೆಚ್ಚ, ವಿಮಾ ವೆಚ್ಚ, ಸಿಬ್ಬಂದಿಗಳ ವೆಚ್ಚ, ಟೈರ್ಗಳ ವೆಚ್ಚ ಹಾಗೂ ಇತರೆ ವೆಚ್ಚಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ವಿವರಿಸಲಾಗಿದೆ. ಉಪಮುಖ್ಯಮಂತ್ರಿ, ಸಾರಿಗೆ ಸಚಿವರು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಈಗ ಅಧಿಕೃತವಾಗಿ ಆದೇಶ ಹೊರಬಿದ್ದಿದೆ.
In the wake of private ambulances fleecing COVID-19 patients by charging exorbitant rates, the state government has fixed a maximum fare that can be charged by the ambulance service provider.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm