ಬ್ರೇಕಿಂಗ್ ನ್ಯೂಸ್
22-05-21 11:46 am Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಮೇ 21: ಕೊರೊನಾ ವೈರಸ್ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗೀ ಆ್ಯಂಬುಲೆನ್ಸ್ಗಳು ಅಕ್ಷರಶಃ ಸುಲಿಗೆಗೆ ಇಳಿದಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾಸಗೀ ಆ್ಯಂಬುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ.
ಎರಡು ವಿಭಾಗದಲ್ಲಿ ಆ್ಯಂಬುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದೆ. ಸಾಮಾನ್ಯ ಆ್ಯಂಬುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆ್ಯಂಬುಲೆನ್ಸ್)ಮೊದಲ 10 ಕಿ.ಮೀಟರ್ಗಳಿಗೆ 1500 ರೂಪಾಯಿ ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. 10 ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ 120 ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ಗಂಟೆಗೆ 200 ರೂಪಾಯಿ ವೈಟಿಂಗ್ ಚಾರ್ಜ್ ಎಂದು ನಿಗದಿಗೊಳಿಸಲಾಗಿದೆ.
ಇನ್ನು ಬೇಸಿಕ್ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್(ಬಿಎಲ್ಎಸ್)ಗಳಿಗೆ ಮೊದಲ 10 ಕಿಮೀಗಳಿಗೆ 2000 ರೂಪಾಯಿ ನಿಗದಿಗೊಳಿಸಿದ್ದು 10 ಕಿಮೀ ನಂತರದ ಪ್ರಯಾಣಕ್ಕೆ ಪ್ರತಿ ಕಿಮೀಗೆ ಗರಿಷ್ಟ 120 ರೂಪಾಯಿ ವಿಧಿಸಲು ಅವಕಾಶ ನೀಡಲಾಗಿದೆ. ಇದು ಕೂಡ ದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ವೈಟಿಂಗ್ ಚಾರ್ಚ್ ಗಂಟೆಗೆ 250 ರೂ ನಿಗದಿಗೊಳಿಸಿದೆ.
ಈ ದರ ನಿಗದಿಪಡಿಸಲು ನೋಂದಣಿ ವೆಚ್ಚ, ವಿಮಾ ವೆಚ್ಚ, ಸಿಬ್ಬಂದಿಗಳ ವೆಚ್ಚ, ಟೈರ್ಗಳ ವೆಚ್ಚ ಹಾಗೂ ಇತರೆ ವೆಚ್ಚಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ವಿವರಿಸಲಾಗಿದೆ. ಉಪಮುಖ್ಯಮಂತ್ರಿ, ಸಾರಿಗೆ ಸಚಿವರು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಈಗ ಅಧಿಕೃತವಾಗಿ ಆದೇಶ ಹೊರಬಿದ್ದಿದೆ.
In the wake of private ambulances fleecing COVID-19 patients by charging exorbitant rates, the state government has fixed a maximum fare that can be charged by the ambulance service provider.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm