ಬ್ರೇಕಿಂಗ್ ನ್ಯೂಸ್
22-05-21 11:46 am Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಮೇ 21: ಕೊರೊನಾ ವೈರಸ್ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗೀ ಆ್ಯಂಬುಲೆನ್ಸ್ಗಳು ಅಕ್ಷರಶಃ ಸುಲಿಗೆಗೆ ಇಳಿದಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾಸಗೀ ಆ್ಯಂಬುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ.
ಎರಡು ವಿಭಾಗದಲ್ಲಿ ಆ್ಯಂಬುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದೆ. ಸಾಮಾನ್ಯ ಆ್ಯಂಬುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆ್ಯಂಬುಲೆನ್ಸ್)ಮೊದಲ 10 ಕಿ.ಮೀಟರ್ಗಳಿಗೆ 1500 ರೂಪಾಯಿ ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. 10 ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ 120 ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ಗಂಟೆಗೆ 200 ರೂಪಾಯಿ ವೈಟಿಂಗ್ ಚಾರ್ಜ್ ಎಂದು ನಿಗದಿಗೊಳಿಸಲಾಗಿದೆ.



ಇನ್ನು ಬೇಸಿಕ್ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್(ಬಿಎಲ್ಎಸ್)ಗಳಿಗೆ ಮೊದಲ 10 ಕಿಮೀಗಳಿಗೆ 2000 ರೂಪಾಯಿ ನಿಗದಿಗೊಳಿಸಿದ್ದು 10 ಕಿಮೀ ನಂತರದ ಪ್ರಯಾಣಕ್ಕೆ ಪ್ರತಿ ಕಿಮೀಗೆ ಗರಿಷ್ಟ 120 ರೂಪಾಯಿ ವಿಧಿಸಲು ಅವಕಾಶ ನೀಡಲಾಗಿದೆ. ಇದು ಕೂಡ ದು ಆಮ್ಲಜನಕ, ಪಿಪಿಇ ಕಿಟ್, ಗ್ಲೌಸ್, ಮಾಸ್ಕ್, ಶೀಲ್ಡ್, ಸ್ಯಾನಿಟೈಸರ್, ಡ್ರೈವರ್ ಈ ಎಲ್ಲವನ್ನೂ ಒಳಗೊಂಡಿರುತ್ತದೆ. ವೈಟಿಂಗ್ ಚಾರ್ಚ್ ಗಂಟೆಗೆ 250 ರೂ ನಿಗದಿಗೊಳಿಸಿದೆ.

ಈ ದರ ನಿಗದಿಪಡಿಸಲು ನೋಂದಣಿ ವೆಚ್ಚ, ವಿಮಾ ವೆಚ್ಚ, ಸಿಬ್ಬಂದಿಗಳ ವೆಚ್ಚ, ಟೈರ್ಗಳ ವೆಚ್ಚ ಹಾಗೂ ಇತರೆ ವೆಚ್ಚಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ವಿವರಿಸಲಾಗಿದೆ. ಉಪಮುಖ್ಯಮಂತ್ರಿ, ಸಾರಿಗೆ ಸಚಿವರು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಈಗ ಅಧಿಕೃತವಾಗಿ ಆದೇಶ ಹೊರಬಿದ್ದಿದೆ.
In the wake of private ambulances fleecing COVID-19 patients by charging exorbitant rates, the state government has fixed a maximum fare that can be charged by the ambulance service provider.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm