ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.

ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.

ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm