ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.

ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.

ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm