ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.
ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.
ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm